Mysuru Dasara Mahotsav-2024: ಸಂತಸಭರಿತ ರೈತನನ್ನು ನೋಡುವುದಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಸಿದ್ದರಾಮಯ್ಯ

Updated on: Oct 12, 2024 | 2:51 PM

Mysuru Dasara Mahotsav-2024: ವಿಜಯದಶಮಿ ಆಚರಣೆಯ ಕಾರಣ ವಿವರಿಸಿದ ಸಿದ್ದರಾಮಯ್ಯ, ಹಬ್ಬವು ಶಿಷ್ಟ ರಕ್ಷಣೆ ಮತ್ತು ದುಷ್ಟ ಸಂಹಾರದ ದ್ಯೋತಕವಾಗಿದೆ, ಬೇರೆಯವರ ಬದುಕನ್ನು ಹಾಳು ಮಾಡಲು ಬಯಸುವವರಿಗೆ ಮತ್ತು ಕೇವಲ ಕೆಟ್ಟದ್ದನ್ನು ಮಾತ್ರ ಯೋಚನೆ ಮಾಡುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ ಎಂದರು.

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಮೊದಲು ಮಾಧ್ಯಮದವರೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ದಸರಾ ಉತ್ಸವದ ಪ್ರಮುಖ ಸಂಗತಿಯೆಂದರೆ ನಾಡಿನ್ಯಾದ್ಯಂತ ಉತ್ತಮ ಮಳೆಯಾದ ಕಾರಣ ಸಮೃದ್ಧ ಬೆಳೆ ಕಾಣುತ್ತಿರುವ ರೈತನ ಮೊಗದಲ್ಲಿ ಸಂತಸವಿದೆ, ನೆಮ್ಮದಿಯ ರೈತನನ್ನು ನೋಡಿ ಸಿಗುವ ಸಂತೋಷಕ್ಕಿಂತ ದೊಡ್ಡದು ಮತ್ತೊಂದಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಜೃಂಭಣೆಯಿಂದ ನಡೆಯುವ ಉಡುಪಿಯ ಉಚ್ಚಿಲ ಮಹಾಲಕ್ಷ್ಮೀ ದಸರಾ ಮಹೋತ್ಸವದ ವಿಶೇಷತೆ ತಿಳಿಯಿರಿ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More