AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು! ಶುದ್ಧ ನೀರಿನ ಘಟಕಗಳು ಬಂದ್

ಪ್ರಿಯಾಂಕ್ ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು! ಶುದ್ಧ ನೀರಿನ ಘಟಕಗಳು ಬಂದ್

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Apr 25, 2026 | 1:44 PM

Share

ಕಲಬುರಗಿ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಕಳೆದ ಎರಡು-ಮೂರು ತಿಂಗಳಿಂದ ಬಂದ್ ಆಗಿವೆ. ಇದರಿಂದ ಕಚೇರಿಗೆ ಬರುವ ಸಾವಿರಾರು ಸಾರ್ವಜನಿಕರು ಹಾಗೂ ಅಧಿಕಾರಿಗಳು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ. ಬೇಸಿಗೆಯ ಬಿಸಿಲು ಹೆಚ್ಚಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಿರ್ಲಕ್ಷ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ, ಏಪ್ರಿಲ್ 25: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉಸ್ತುವಾರಿ ಸಚಿವರಾಗಿರುವ, ಅವರ ತವರು ಜಿಲ್ಲೆಯೂ ಆಗಿರುವ ಕಲಬುರಗಿಯ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಜಿಲ್ಲೆಯ ‘ಶಕ್ತಿ ಕೇಂದ್ರ’ ಎಂದೇ ಕರೆಯಲ್ಪಡುವ ಈ ಕಚೇರಿಯಲ್ಲಿ ಹೊರಗಡೆ ಇರುವ ಒಂದು ಹಾಗೂ ಒಳಗಡೆ ಇರುವ ಎರಡು ಶುದ್ಧ ನೀರಿನ ಘಟಕಗಳು ಸಂಪೂರ್ಣವಾಗಿ ಕೆಟ್ಟು ಹೋಗಿವೆ. ಕಳೆದ ಎರಡು-ಮೂರು ತಿಂಗಳಿಂದ ನೀರು ಪೂರೈಕೆ ಇಲ್ಲದೆ ಸಾವಿರಾರು ಸಾರ್ವಜನಿಕರು ಮತ್ತು ಅಧಿಕಾರಿಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಅಧಿಕಾರಿಗಳು ಮನೆಯಿಂದಲೇ ನೀರಿನ ಬಾಟಲಿಗಳನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಪಮಾನ ಹೆಚ್ಚಿದ್ದರೂ, ಜಿಲ್ಲೆಯ ಹಳ್ಳಿಗಳಿಗೆ ಸಮರ್ಪಕ ನೀರು ಒದಗಿಸುವ ಜವಾಬ್ದಾರಿಯಿರುವ ಜಿಲ್ಲಾಡಳಿತವೇ ತನ್ನ ಆವರಣದಲ್ಲಿ ಕುಡಿಯುವ ನೀರು ಒದಗಿಸಲು ವಿಫಲವಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಜಿಲ್ಲಾಡಳಿತ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us