ಹುಬ್ಬಳ್ಳಿಯಲ್ಲಿ ರಾತ್ರಿಯಿಡೀ ಮಳೆಯಿಂದ ಮನೆಯೊಳಗೆ ನುಗ್ಗಿದ ಕೊಳಚೆ ನೀರು; ಊಟವಿಲ್ಲ, ನಿದ್ರೆಯಿಲ್ಲ

Updated on: Jun 12, 2025 | 11:21 AM

ಮನೆಯೊಳಗೆ ನುಗ್ಗಿರೋದು ಚರಂಡಿಗಳಲ್ಲಿ ಹರಿಯುವ ಕೊಳಚೆ ನೀರು ಎಂದು ನಿವಾಸಿಗಳು ಹೇಳುತ್ತಾರೆ. ದಿನವಿಡೀ ದುಡಿದು ಮನೆಗೆ ಬರುವ ತಮಗೆ ರಾತ್ರಿ ಊಟ ಮತ್ತು ಒಂದಷ್ಟು ನಿದ್ದೆ ಸಿಗದಂಥ ಸ್ಥಿತಿ ನಿರ್ಮಣವಾಗುತ್ತದೆ. ಮನೆಯನ್ನು ನೋಡಿದರೆ ಈ ಜನ ಅನುಭವಿಸಿರುವ ಕಷ್ಟ ಗೊತ್ತಾಗುತ್ತದೆ. ಮಳೆ ನಿಂತು ಬೆಳಗು ಮೂಡಿದರೂ ಮನೆ ಆರಿಲ್ಲ, ಹೊಸ್ತಿಲ ಬಳಿಯಿರುವ ನೀರನ್ನು ಹಿರಿಯ ಮಹಿಳೆ ಹೊರಹಾಕುತ್ತಿದ್ದಾರೆ.

ಹುಬ್ಬಳ್ಳಿ, ಜೂನ್ 12: ಹುಬ್ಬಳ್ಳಿಯಲ್ಲಿ (Hubballi city) ನಿನ್ನೆ ಸಾಯಂಕಾಲ ಶುರುವಾದ ಮಳೆ ತಡರಾತ್ರಿವರೆಗೆ ಸುರಿದಿದೆ. ನಗರದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಅಂತ ಹೇಳಿದರೆ ಅಂಡರ್​ಸ್ಟೇಟ್​ಮೆಂಟ್ ಅನಿಸಿಕೊಳ್ಳುತ್ತದೆ. ನಮ್ಮ ಹುಬ್ಬಳ್ಳಿ ವರದಿಗಾರ ಮಳೆಯಿಂದ ಪ್ರಭಾವಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಮಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ಮನೆಗಳನ್ನು ಮಾಡಿಕೊಂಡವರು ಹೆಚ್ಚಿನ ಸಮಸ್ಯೆಗಳಿಗೆ ಒಳಗಾಗಿದ್ದಾರೆ. ದೃಶ್ಯಗಳಲ್ಲಿ ಕಾಣುತ್ತಿರುವ ಮನೆಯ ನಿವಾಸಿಗಳು ರಾತ್ರಿಯಿಡೀ ಮನೆಯೊಳಗೆ ನುಗ್ಗಿದ ನೀರಿನೊಂದಿಗೆ ಏಗಿದ್ದಾರೆ. ಇವರಲ್ಲಿ ಯಾರೂ ಊಟ ಮಾಡಿಲ್ಲ, ನಿದ್ರಿಸುವುದಂತೂ ದೂರದ ಮಾತು. ಪ್ರತಿಮಳೆಗಾಲದಲ್ಲಿ ಇಂಥ ಪರಿಸ್ಥಿತಿ ಎದುರಾಗುತ್ತದೆ, ಜನಪ್ರತಿನಿಧಿಗಳಿಂದ ಭರವಸೆ ಬಿಟ್ಟರೆ ಮತ್ತೇನೂ ಸಿಗುತ್ತಿಲ್ಲ ಎಂದು ಮನೆಯಲ್ಲಿ ವಾಸಮಾಡುವ ಜನ ಹೇಳುತ್ತಾರೆ.

ಇದನ್ನೂ ಓದಿ:  Karnataka Rains: ಕರ್ನಾಟಕದಲ್ಲಿ ಜೂನ್ 13ರಿಂದ ಮಳೆ ಜೋರು, ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More