ಘಟಪ್ರಭಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು, ಹಿಡ್ಕಲ್ ಜಲಾಶಯದ ಹಿನ್ನೀರಲ್ಲಿರುವ ವಿಟ್ಠಲ ದೇವಸ್ಥಾನ ಭಾಗಶಃ ಮುಳುಗಡೆ

ಘಟಪ್ರಭಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು, ಹಿಡ್ಕಲ್ ಜಲಾಶಯದ ಹಿನ್ನೀರಲ್ಲಿರುವ ವಿಟ್ಠಲ ದೇವಸ್ಥಾನ ಭಾಗಶಃ ಮುಳುಗಡೆ
|

Updated on: Jul 09, 2024 | 11:33 AM

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾದರೆ ನೀರು ಹಲವಾರು ನದಿಗಳಿಗೆ ಹರಿದು ಹೋಗುತ್ತದೆ ಮತ್ತು ಅಲ್ಲೇ ಉದ್ಭವಿಸುವ ಘಟಪ್ರಭಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುವುದು ಸ್ವಾಭಾವಿಕ. ಬೆಳಗಾವಿ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಮಳೆಯ ಪ್ರತಾಪಕ್ಕೆ ಎಣೆಯಿಲ್ಲ. ಬೆಳಗಾವಿಗೆ ಹತ್ತಿರದ ಮಹಾರಾಷ್ಟ್ರದ ಅನೇಕ ಭಾಗಗಳಲ್ಲಿ ಮಳೆ ಧೋ ಅಂತ ಸುರಿಯುತ್ತಿದೆ.

ಬೆಳಗಾವಿ: ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸುರಿಯುವುದು ಮುಂದುವರಿದಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದೆ ಮತ್ತು ಜಿಲ್ಲೆಯ ಮೂಲಕ ಹರಿಯುವ ಎಲ್ಲ ನದಿಗಳು ಹೆಚ್ಚು ಕಡಿಮೆ ತುಂಬಿ ಹರಿಯುತ್ತಿವೆ. ನಮ್ಮ ಬೆಳಗಾವಿ ವರದಿಗಾರ ಹುಕ್ಕೇರಿ ತಾಲ್ಲೂಕಿನ ಹುನ್ನೂರು ಗ್ರಾಮದಿಂದ ಈ ವರದಿ ಕಳಿಸಿದ್ದಾರೆ. ಅವರು ಹೇಳುವ ಪ್ರಕಾರ ಪಶ್ಚಿಮ ಘಟ್ಟದಲ್ಲಿ ಹುಟ್ಟುವ ಘಟಪ್ರಭಾ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ ಮತ್ತು ಹಿಡ್ಕಲ್ ಜಲಾಶಯ ಭರ್ತಿಯಾಗಿದೆ, ಜಲಾಶಯದ ಹಿನ್ನೀರಿನಲ್ಲಿರುವ ವಿಟ್ಠಲ ದೇವಸ್ಥಾನ ಆಲ್ಮೋಸ್ಟ್ ಮುಳುಗಡೆಯಾಗಿದೆ. ದೇವಸ್ಥಾನದ ಎತ್ತರ 148ಅಡಿ, ಆದರೆ ಅದರ ಗೋಪುರ ಮಾತ್ರ ಚುರಿಸುವಷ್ಟು ನೀರು ಆವರಿಸಿದೆ. ಹುನ್ನೂರು ಗ್ರಾಮದ ನಿವಾಸಿಯೊಬ್ಬರು ಹೇಳುವ ಹಾಗೆ ಸುಮಾರು 97 ವರ್ಷಗಳಷ್ಟು ಹಿಂದೆ ದೇವಸ್ಥಾನವನ್ನು ಕಟ್ಟಲಾಗಿದೆ ಮತ್ತು ಭಕ್ತಾದಿಗಳ ದರ್ಶನಕ್ಕಾಗಿ ಕಳೆದ ತಿಂಗಳಷ್ಟೇ ಅದನ್ನು ತೆರೆಯಲಾಗಿತ್ತಂತೆ. ಅದರೆ ಇನ್ನು ಮಳೆಗಾಲ ಮುಗಿಯುವವರೆಗೆ ಭಕ್ತರಿಗೆ ವಿಟ್ಠಲನ ದರ್ಶನ ಭಾಗ್ಯ ಸಿಗಲಾರದು. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಸುರಿಯುವುದು ಮುಂದುವರಿಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮಳೆಯಿಂದ ಒಂದೇ ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 24 ಮನೆಗಳಿಗೆ ಹಾನಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ