ಭರ್ಜರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನ ಜೀವನ ಅಸ್ತವ್ಯಸ್ತ, ಯಾವೂರಲ್ಲಿ?

[lazy-load-videos-and-sticky-control id=”UKEsYMdNWyg”] ದಾವಣಗೆರೆ: ಜಿಲ್ಲೆಯಲ್ಲಿ‌ ಮಳೆ ಅರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಕೆರೆ‌ಕಟ್ಟೆಗಳು ತುಂಬಿರುವ ಪರಿಣಾಮ ಕೆಲ ಗ್ರಾಮದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ, ಯರವನಾಗತಿಹಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ‌ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಆ ಭಾಗದ ಕೆರೆ‌ಕಟ್ಟೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಕೆಲವು ಗ್ರಾಮಗಳ ಮನೆಗೆ ನೀರು ನುಗ್ಗಿದೆ. ಜೊತೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು,ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಳೆ ಹಾನಿ ಸಮೀಕ್ಷೆಗೆ […]

ಭರ್ಜರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನ ಜೀವನ ಅಸ್ತವ್ಯಸ್ತ, ಯಾವೂರಲ್ಲಿ?
ಸಾಧು ಶ್ರೀನಾಥ್​

Updated on: Sep 10, 2020 | 11:01 AM

[lazy-load-videos-and-sticky-control id=”UKEsYMdNWyg”]

ದಾವಣಗೆರೆ: ಜಿಲ್ಲೆಯಲ್ಲಿ‌ ಮಳೆ ಅರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಕೆರೆ‌ಕಟ್ಟೆಗಳು ತುಂಬಿರುವ ಪರಿಣಾಮ ಕೆಲ ಗ್ರಾಮದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ, ಯರವನಾಗತಿಹಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ‌ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಆ ಭಾಗದ ಕೆರೆ‌ಕಟ್ಟೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಕೆಲವು ಗ್ರಾಮಗಳ ಮನೆಗೆ ನೀರು ನುಗ್ಗಿದೆ.

ಜೊತೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು,ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಳೆ ಹಾನಿ ಸಮೀಕ್ಷೆಗೆ ಮುಂದಾಗಿದೆ.

Published On - 10:29 am, Thu, 10 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us