AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 17, 2026 | 9:29 PM

Share

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತ ನೀರಾವರಿ ಯೋಜನೆಯ ಮುಖ್ಯ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ನೀರು ಚಿಮ್ಮಿದೆ ಘಟನೆ ನಡೆದಿದೆ. ಈ ಘಟನೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ, ಜುಲೈ 17: ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತನೀರಾವರಿ ಯೋಜನೆಯ ಮುಖ್ಯ ಪೈಪ್‌ಲೈನ್ ಒಡೆದ ಪರಿಣಾಮ ಗಗನದೆತ್ತರಕ್ಕೆ ನೀರು ಚಿಮ್ಮಿದ ಘಟನೆ ನಡೆದಿದೆ. ಪೈಪ್‌ಲೈನ್ ಸಂಪೂರ್ಣವಾಗಿ ಹಾನಿಗೊಳಗಾದ ಪರಿಣಾಮ ಬೃಹತ್ ಪ್ರಮಾಣದಲ್ಲಿ ನೀರು ಆಕಾಶದತ್ತ ಚಿಮ್ಮಿದೆ. ಸುತ್ತಲಿನ ಹೊಲಗದ್ದೆಗಳು ಹಾಗೂ ರಸ್ತೆಗೆ ನೀರು ಹರಿದಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ರೈತರ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಇನ್ನು ಆಕಾಶದೆತ್ತರಕ್ಕೆ ಚಿಮ್ಮಿದ ನೀರಿನ ದೃಶ್ಯವು ನೋಡುಗರಲ್ಲಿ ತೀವ್ರ ಅಚ್ಚರಿ ಹಾಗೂ ಕೌತುಕವನ್ನು ಮೂಡಿಸಿದೆ. ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ರೈತರು ಆತಂಕಗೊಂಡಿದ್ದು, ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಪೈಪ್‌ಲೈನ್ ದುರಸ್ತಿಗೊಳಿಸಿ ನೀರು ಪೋಲಾಗುವುದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 17, 2026 09:27 PM

Follow Us