ಕಬಿನಿ ಜಲಾಶಯದಿಂದ ನೀರು ರಿಲೀಸ್; ನದಿ ಪಾತ್ರದ ಜನರಿಗೆ ಮೈಸೂರು ಜಿಲ್ಲಾಡಳಿತ ಎಚ್ಚರಿಕೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2024 | 9:12 PM

ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿದೆ. ಕೇರಳದ ವಯನಾಡಿನಲ್ಲಿ ಮಳೆ‌(Rain)ಯ ಪ್ರಮಾಣ ಹೆಚ್ಚಿದ್ದು, ಈ ಹಿನ್ನಲೆ ಮೈಸೂರು ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಸಮೀಪದ ಕಬಿನಿ ಜಲಾಶಯ(Kabini Dam)ದಿಂದ ಮತ್ತಷ್ಟು ನೀರು ಬಿಡುಗಡೆ ಮಾಡಿದೆ.

ಮೈಸೂರು, ಜು.13: ಕೇರಳದ ವಯನಾಡಿನಲ್ಲಿ ಮಳೆ‌(Rain)ಯ ಪ್ರಮಾಣ ಹೆಚ್ಚಿದ್ದು, ಈ ಹಿನ್ನಲೆ ಮೈಸೂರು ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಸಮೀಪದ ಕಬಿನಿ ಜಲಾಶಯ(Kabini Dam)ದಿಂದ ಮತ್ತಷ್ಟು ನೀರು ಬಿಡುಗಡೆ ಮಾಡಿದೆ. ಹೌದು, ಜಲಾಶಯದ ಮಟ್ಟ 83.30 ಅಡಿ ತಲುಪಿದ್ದರಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನು ಈ ಡ್ಯಾಂ, 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ‌ ಹೊಂದಿದೆ. ಸದ್ಯ ಜಲಾಶಯದಲ್ಲಿ 19.06 ಟಿಎಂಸಿ ನೀರು ಸಂಗ್ರಹವಾಗಿದೆ. ಜೊತೆಗೆ 19,181 ಕ್ಯೂಸೆಕ್ ಜಲಾಶಯದ ಒಳಹರಿವು ಇದೆ. ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಹಿನ್ನಲೆ ನದಿ ಪಾತ್ರದ ಜನರಿಗೆ ಮೈಸೂರು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More