ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

Edited By:

Updated on: Jun 20, 2025 | 11:54 AM

ಈ ವರ್ಷ ಮುಂಗಾರು ಮಳೆಯ ಅಬ್ಬರ ಅವಧಿಗೂ ಮುನ್ನವೇ ಕೆಆರ್​​ಎಸ್ ಡ್ಯಾಂ ಭರ್ತಿಯಾಗುವತ್ತ ಕೊಮಡೊಯ್ದಿದೆ. ಪರಿಣಾಮವಾಗಿ ಡ್ಯಾಂ ಭರ್ತಿಯಾಗಲು ಇನ್ನು 7 ಅಡಿ ಅಷ್ಟೇ ಬಾಕಿ ಇದೆ. ಹೀಗಾಗಿ ಡ್ಯಾಂನಿಂದ ನದಿಗೆ ನೀರು ಬಿಡುವ ಸಂದರ್ಭ ಬರುವ ಮುನ್ಸೂಚನೆ ಇದ್ದು, ಕಾವೇರಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.

ಶ್ರೀರಂಗಪಟ್ಟಣ, ಜೂನ್ 20: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಶ್ರೀರಂಗಪಟ್ಟಣ ತಹಶೀಲ್ದಾರ್ ಪತ್ರ ಬರೆದು ಮನವಿ ಮಾಡಿದ್ದಾರೆ. ಸದ್ಯ ಕೆಆರ್​ಎಸ್ ಡ್ಯಾಂ 117.40 ಅಡಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣ ಭರ್ತಿಯಾಗಲು ಇನ್ನು 7 ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ 23,473 ಕ್ಯೂಸೆಕ್ ನೀರು ಒಳಹರಿವು ಇದ್ದು, ಯಾವುದೇ ಕ್ಷಣದಲ್ಲಿ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಬೇಕಾಗಿ ಬರಬಹುದು. ಹೀಗಾಗಿ ತಹಶೀಲ್ದಾರ್ ಪತ್ರದ ಮೂಲಕ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದ್ದಾರೆ.

2025-26 ನೇ ಸಾಲಿನಲ್ಲಿ ಮುಂಗಾರು ಮಳೆಯಿಂದ ಕೃಷ್ಣರಾಜ ಸಾಗರ ಡ್ಯಾಂನಲ್ಲಿ ನೀರು ಹೆಚ್ಚಾಗುತ್ತಿರುವ ಕಾರಣ ಕಾವೇರಿ ನದಿಯ ಜಲನಯನ ಪ್ರದೇಶದಲ್ಲಿನ ಜನರಿಗೆ ಮುನ್ನೆಚ್ಚರಿಕೆ ಕ್ರಮವಹಿಸುವ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ದೂರವಾಣಿ ಸಂದೇಶದ ಮೇರೆಗೆ ಈ ಪತ್ರ ಬರೆಯಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಎಚ್ಚರಿಕೆ ಸಂದೇಶದಲ್ಲೇನಿದೆ?

ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ 2025-26 ನೇ ಸಾಲಿನಲ್ಲಿ ಮುಂಗಾರು ಮಳೆಯಿಂದ ಕೃಷ್ಣರಾಜ ಸಾಗರ ಡ್ಯಾಂನಲ್ಲಿ ನೀರು ಹೆಚ್ಚಾಗಿರುತ್ತಾದೆ. ಅದ್ದರಿಂದ ಕೆಆರ್​​ಎಸ್​​ ಡ್ಯಾಂನಿಂದ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಹೊರಬಿಡುವ ಸಾಧ್ಯತೆ ಇರುವುದರಿಂದ ಕಾವೇರಿ ನದಿ ಪಾತ್ರ ಅಚ್ಚುಕಟ್ಟು ಪ್ರದೇಶದಲ್ಲಿ ವಾಸವಿರುವ ಜನ-ಜನುವಾರು ಹಾಗೂ ಇತರೆ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗುವ ಸಂಭವವಿರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲು ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More