AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ

ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 31, 2026 | 2:20 PM

Share

ಬೇಸಿಗೆ ಶುರುವಾಗುತ್ತಿದ್ದಂತೆ ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಹುಬ್ಬಳ್ಳಿಯ ಕಿಲಳೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಜನರು ದಿನನಿತ್ಯ ಪರಿತಪಿಸುತ್ತಿದ್ದಾರೆ. ರಾಯಚೂರಿನಲ್ಲಿ ಡಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 150ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವಂತೆ ಮತ್ತು ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮದ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ/ರಾಯಚೂರು, ಮಾರ್ಚ್​​ 31: ಬೇಸಿಗೆ ಆರಂಭವಾಗುತ್ತಿದ್ದಂತೆ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 150ಕ್ಕೂ ಹೆಚ್ಚು ಕೆರೆಗಳನ್ನು ಭರ್ತಿ ಮಾಡುವಂತೆ ಆದೇಶಿಸಿದ್ದು, ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 31, 2026 01:33 PM
Follow Us