Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ

ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ

Anil Kalkere
| Updated By: ಆಯೇಷಾ ಬಾನು

Updated on: Mar 05, 2024 | 12:47 PM

ಬೆಂಗಳೂರಿನ ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಹನಿ ನೀರಿಗೂ ಜನ ಪರದಾಡುವಂತಹ ಸ್ಥಿತಿ ಇದೆ. ಅದರಲ್ಲೂ ಮುಖ್ಯಮಂತ್ರಿಗಳ ಗೃಹಕಚೇರಿಗೂ ನೀರಿನ ಸಮಸ್ಯೆ ಎದುರಾಗಿದೆ. ಸಿಎಂ ಗೃಹಕಚೇರಿ ಕೃಷ್ಣಾಗೆ BWSSBಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ.

ಬೆಂಗಳೂರು, ಮಾರ್ಚ್​.05: ಈ ಬಾರಿ ರಾಜ್ಯದಲ್ಲಿ‌ ಬರಗಾಲ ಎದುರಾಗಿದೆ. ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳಿಗೆ ನೀರಿಲ್ಲ. ಕುಡಿಯೋ ನೀರಿಗೂ ಆಹಾಕಾರ‌ ಎದುರಾಗಿದೆ. ಹೀಗಾಗಿ‌ ರಾಜ್ಯದಲ್ಲಿನ‌ ಬರ ನಿರ್ವಹಣೆ ಪರಿಶೀಲನೆ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಸ್ವತಃ ಮುಖ್ಯಮಂತ್ರಿಗಳ ಗೃಹಕಚೇರಿಗೂ ನೀರಿನ ಬಿಸಿ ತಟ್ಟಿದೆ. ಸಿಎಂ ಗೃಹಕಚೇರಿ ಕೃಷ್ಣಾಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನೀರಿನ ಬವಣೆ ಹೆಚ್ಚಾದ ಬೆನ್ನಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸಿಎಂ ಗೃಹಕಚೇರಿಯಲ್ಲೂ ನೀರಿನ ಸಮಸ್ಯೆ ಎದುರಾಗಿದ್ದು ಜಲಮಂಡಳಿ ಟ್ಯಾಂಕರ್​ನಲ್ಲಿ ನೀರು ಪೂರೈಕೆ ಮಾಡಲಾಗಿದೆ. ಬರ ನಿರ್ವಹಣೆ ಸಭೆಗೂ ಮುನ್ನ ಟ್ಯಾಂಕರ್​ನಲ್ಲಿ ನೀರು ಪೂರೈಕೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ