AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ

ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ

ನಯನಾ ರಾಜೀವ್
|

Updated on:Jul 10, 2026 | 2:58 PM

Share

ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ನಾಪತ್ತೆಯಾಗಿದ್ದ ಐವರ ಪೈಕಿ ನಾಲ್ವರ ಮೃತದೇಹಗಳು ಈಗಾಗಲೇ ಪತ್ತೆಯಾಗಿದ್ದು, ಒಬ್ಬರಿಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಮಳೆ ಹಾಗೂ ನೀರಿನ ಹರಿವಿನ ನಡುವೆಯೂ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಲ್ಲಾಡಿಯಲ್ಲಿ ಸಂಭವಿಸಿದ ಈ ಭೂಕುಸಿತವು ಕೃತಕ ಮಣ್ಣಿನ ಗುಡ್ಡದಿಂದಲೇ ಉಂಟಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸುರಂಗ ಮಾರ್ಗ ಕಾಮಗಾರಿಗಾಗಿ ತೆಗೆದಿದ್ದ ಮಣ್ಣನ್ನು ಸ್ಥಳದಲ್ಲೇ ಸಂಗ್ರಹಿಸಿದ್ದರಿಂದ ಇದು ಕೃತಕ ಬೆಟ್ಟದಂತೆ ರೂಪುಗೊಂಡಿತ್ತು.

ತಿರುವನಂತಪುರಂ, ಜುಲೈ 10: ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ನಾಪತ್ತೆಯಾಗಿದ್ದ ಐವರ ಪೈಕಿ ನಾಲ್ವರ ಮೃತದೇಹಗಳು ಈಗಾಗಲೇ ಪತ್ತೆಯಾಗಿದ್ದು, ಒಬ್ಬರಿಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಮಳೆ ಹಾಗೂ ನೀರಿನ ಹರಿವಿನ ನಡುವೆಯೂ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಲ್ಲಾಡಿಯಲ್ಲಿ ಸಂಭವಿಸಿದ ಈ ಭೂಕುಸಿತವು ಕೃತಕ ಮಣ್ಣಿನ ಗುಡ್ಡದಿಂದಲೇ ಉಂಟಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸುರಂಗ ಮಾರ್ಗ ಕಾಮಗಾರಿಗಾಗಿ ತೆಗೆದಿದ್ದ ಮಣ್ಣನ್ನು ಸ್ಥಳದಲ್ಲೇ ಸಂಗ್ರಹಿಸಿದ್ದರಿಂದ ಇದು ಕೃತಕ ಬೆಟ್ಟದಂತೆ ರೂಪುಗೊಂಡಿತ್ತು. ಜಿಲ್ಲಾಡಳಿತವು ಈ ಮಣ್ಣನ್ನು ತೆರವುಗೊಳಿಸಲು ಸೂಚನೆ ನೀಡಿದ್ದರೂ, ಅದನ್ನು ಪಾಲಿಸಿರಲಿಲ್ಲ. ಈ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ಇದು ಮಾನವ ನಿರ್ಮಿತ ದುರಂತವಾಗಿದ್ದು, ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ಉಂಟಾಗುವ ನಿರ್ಲಕ್ಷ್ಯಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಕಳೆದ ವರ್ಷ ಉತ್ತರ ಕನ್ನಡದಲ್ಲಿ ಸಂಭವಿಸಿದ ದುರಂತಗಳು, ಕೇರಳದ ಇತರೆಡೆಗಳಲ್ಲಿ ಆದ ಅನಾಹುತಗಳೂ ಕೂಡ ಇಂತಹ ಆರೋಪಗಳಿಗೆ ಗುರಿಯಾಗಿವೆ. ಅಮೂಲ್ಯ ಜೀವಗಳನ್ನು ಉಳಿಸಲು ಇಂತಹ ನಿರ್ಲಕ್ಷ್ಯಗಳನ್ನು ತಡೆಯುವುದು ಅನಿವಾರ್ಯವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jul 10, 2026 02:57 PM

Follow Us