ಕೇರಳದ ವಯನಾಡಿನಲ್ಲಿ ಸಾವಿನ ಸಂಖ್ಯೆ 225ಕ್ಕೆ ಏರಿಕೆಯಾಗಿದೆ. ಸೇನಾ ಅಧಿಕಾರಿಗಳನ್ನು ಸಹಾಯಕ್ಕಾಗಿ ವಯನಾಡಿಗೆ ಕಳುಹಿಸಲಾಗಿದೆ. ವಯನಾಡಿನಲ್ಲಿ ಭೂಕುಸಿತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸಲು SDF ಮತ್ತು NDRF ತಂಡಗಳು ಸ್ಥಳದಲ್ಲಿಯೇ ಬೀಡುಬಿಟ್ಟಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ.
ಪ್ರಾಕೃತಿಕ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದ್ದ ವಯನಾಡು ಈಗ ಕೆಸರಿನಿಂದ ಆವೃತವಾಗಿ ಭಯಾನಕವಾಗಿ ಕಾಣುತ್ತಿದೆ. ಇಲ್ಲಿನ ಕೆಲವು ಗ್ರಾಮಗಳೇ ಕಣ್ಮರೆಯಾಗಿದ್ದು, ನೂರಾರು ಶವಗಳು ಇನ್ನೂ ಕೆಸರಿನಡಿ ಹೂತುಹೋಗಿವೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ