ಕೇರಳ, ಜುಲೈ 31: ಕೇರಳದ ವಯನಾಡು (Wayanad) ಜಿಲ್ಲೆಯಲ್ಲಿ ಗುಡ್ಡ ಕುಸಿದು ದುರಂತ ಪ್ರಕರಣದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ವಯನಾಡು ಜಿಲ್ಲೆಯ ಚೂರಲ್ಮಲಾ ಗ್ರಾಮದ ಬಳಿ ಜನರು ಸಿಲುಕಿಕೊಂಡಿದ್ದಾರೆ. ಚಾಲಿಯಾರ್ ನದಿಯ ಒಂದು ಭಾಗದಲ್ಲಿ ನೂರಾರು ಜನರು ಸಿಲುಕಿದ್ದು, ತಿನ್ನಲು ಊಟ, ಕುಡಿಯಲು ನೀರು ಇಲ್ಲದೆ ಪರದಾಡುವಂತಾಗಿದೆ. ಸೇನಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಲು ಸಹ ಆಗದ ಸ್ಥಿತಿ ನಿರ್ಮಾಣವಾಗಿದ್ದು, ರಾತ್ರೋರಾತ್ರಿ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಸೇನೆ ಮುಂದಾಗಿದೆ. ಭಾರಿ ತೂಕದ ಕಬ್ಬಿಣದ ಬೀಮ್ ಬಳಸಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ನಾಳೆ ಬೆಳಗ್ಗೆಯೊಳಗೆ ಸೇತುವೆ ನಿರ್ಮಾಣ ಮುಗಿಸಲು ಕಮಾಂಡರ್ ಆದೇಶಿಸಿದ್ದು, ನಾಳೆ ಇದೇ ಬ್ರಿಡ್ಜ್ ಮೇಲೆ ಸಂಚರಿಸಿ ಸೇನೆ ರಕ್ಷಣಾ ಕಾರ್ಯ ನಡೆಸಲಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.