DK Shivakumar; ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವುದು ನಮ್ಮ ಬದ್ಧತೆ ಮತ್ತು ಆದ್ಯತೆಯಾಗಿದೆ: ಡಿಕೆ ಶಿವಕುಮಾರ್

Updated on: May 18, 2023 | 2:12 PM

ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಲು ಅವಕಾಶ ಮಾಡಿಕೊಡಬೇಕಾಗಿ ರಾಜ್ಯಪಾಲರಿಗೆ ಕಳೆದ ರಾತ್ರಿ ತಾವೇ ಖುದ್ದಾಗಿ ಪತ್ರ ಬರೆದಿರುವುದಾಗಿ ಶಿವಕುಮಾರ್ ಹೇಳಿದರು.

ದೆಹಲಿ: ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ (swearing-in ceremony) ನಡೆಸಲು ಅವಕಾಶ ಮಾಡಿಕೊಡಬೇಕಾಗಿ ಕರ್ನಾಟಕದ ರಾಜ್ಯಪಾಲರಿಗೆ (governor) ಕಳೆದ ರಾತ್ರಿ ತಾವೇ ಖುದ್ದಾಗಿ ಪತ್ರ ಬರೆದಿರುವುದಾಗಿ ಶಿವಕುಮಾರ್ ಹೇಳಿದರು. ಉಪಮುಖ್ಯಮಂತ್ರಿ ಸ್ಥಾನ ನೀಡಿರುವ ಬಗ್ಗೆ ತೃಪ್ತಿ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಅವರು ಆ ಪ್ರಶ್ನೆಗೆ ಉತ್ತರಿಸುವ ಬದಲು, ಜನರು ನಮಗೆ ದೊಡ್ಡ ಮ್ಯಾಂಡೇಟ್ ನೀಡಿದ್ದಾರೆ, ಅವರ ಆಸೆ ಆಶೋತ್ತರಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುವುದು ನಮ್ಮ ಕರ್ತವ್ಯವಾಗಿದೆ, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us