ಬೆಳಗಾವಿ ಅಧಿವೇಶನದಲ್ಲಿ ಜಮೀರ್ ಅಹ್ಮದ್ ವಿಕೆಟ್ ಉರುಳಲೇಬೇಕು: ಡಾ ಸಿಎನ್ ಅಶ್ವಥ್ ನಾರಾಯಣ

|

Updated on: Nov 18, 2023 | 5:08 PM

ಇತ್ತೀಚಿಗೆ ಮುಸ್ಲಿಂ ಸಮುದಾಯದ ಸಭೆಯೊಂದರಲ್ಲಿ ಮಾತಾಡಿದ್ದ ಜಮೀರ್, ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತ ಸಮುದಾಯದ ಯುಟಿ ಖಾದರ್ ಅವರನ್ನು ಸ್ಪೀಕರ್ ಆಗಿ ಆರಿಸಿರುವುದರಿಂದ ವಿರೋಧ ಪಕ್ಷಗಳ ಸದಸ್ಯರು ಅವರಿಗೆ ನಡುಬೊಗ್ಗಿಸಿ ನಮಸ್ಕರಿಸಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು.

ಬೆಂಗಳೂರು: ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಗೆ (BZ Zameer Ahmed Khan) ಬೆಳಗಾವಿ ವಿಧಾನ ಸಭಾ ಆಧಿವೇಶನದಲ್ಲಿ ಕಾದಿದೆಯಾ ಆಪತ್ತು? ಬಿಜೆಪಿ ನಾಯಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಹೇಳೋದನ್ನು ಕೇಳಿದರೆ ಹಾಗೆ ಅನ್ನಿಸದಿರದು. ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅರ್ ಅಶೋಕ (R Ashoka) ತಮ್ಮನ್ನು ಭೇಟಿಯಾದ ಬಳಿಕ ಅವರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಆಶ್ವಥ್ ನಾರಾಯಣ, ಬೆಳಗಾವಿ ಅಧಿವೇಶನದಲ್ಲಿ ಜಮೀರ್ ಅಹ್ಮದ್ ನಮ್ಮ ವಿಶೇಷ ವಿಕೆಟ್, ಅದನ್ನು ತೆಗೆಯುತ್ತೇವೆ ಅಂತ ಹೇಳಿದರು. ಜಮೀರ್ ಆಡಿದ್ದು ದುರಹಂಕಾರ, ಅಜ್ಞಾನ ಮತ್ತು ವಿರೋಧ ಪಕ್ಷದ ಸದಸ್ಯರನ್ನು ಅವಮಾನಿಸುವ ಮಾತು, ಕಾಂಗ್ರೆಸ್ ಇದನ್ನು ಸಹಿಸಿಕೊಳ್ಳಬಹುದು, ಆದರೆ ಬಿಜೆಪಿ ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ, ಅವರ ವಿಕೆಟ್ ಉರುಳಿಸುವುದೇ ತಮ್ಮ ಗುರಿ ಎಂದು ಬಿಜೆಪಿ ಶಾಸಕ ಹೇಳಿದರು. ಇತ್ತೀಚಿಗೆ ಮುಸ್ಲಿಂ ಸಮುದಾಯದ ಸಭೆಯೊಂದರಲ್ಲಿ ಮಾತಾಡಿದ್ದ ಜಮೀರ್, ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತ ಸಮುದಾಯದ ಯುಟಿ ಖಾದರ್ ಅವರನ್ನು ಸ್ಪೀಕರ್ ಆಗಿ ಆರಿಸಿರುವುದರಿಂದ ವಿರೋಧ ಪಕ್ಷಗಳ ಸದಸ್ಯರು ಅವರಿಗೆ ನಡುಬೊಗ್ಗಿಸಿ ನಮಸ್ಕರಿಸಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on