ಶ್ರೀರಾಮಚಂದ್ರನನ್ನು ನಾವು ಬಿಜೆಪಿಯವರಿಗಿಂತ ಕಡಿಮೆಯೇನೂ ಪೂಜಿಸುವುದಿಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jan 12, 2024 | 5:49 PM

ಸಿದ್ದರಾಮಯ್ಯ ತನಗೆ ಆಮಂತ್ರಣ ಪತ್ರ ಸಿಕ್ಕಿಲ್ಲ ಎನ್ನುತ್ತಾರೆ, ಒಂದು ಪಕ್ಷ ಸಿಕ್ಕಿದ್ದರೂ ಅವರು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಹೋಗುತ್ತಿರಲಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಆಮಂತ್ರಣ ಪತ್ರ ಸಿಕ್ಕರೂ ಹೋಗುತ್ತಿಲ್ಲ. ಹಾಗಾಗಿ ಸಿದ್ದರಾಮಯ್ಯ ಸಹ ಹೋಗುತ್ತಿರಲಿಲ್ಲ.

ಶಿವಮೊಗ್ಗ: ನಗರದಲ್ಲಿಂದು ಯುವನಿಧಿ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜನವರಿ 22 ರ ನಂತರ ಅಯೋಧ್ಯೆಗೆ ಹೋಗಿ ಶ್ರೀರಾಮನ (Sriram) ದರ್ಶನ ಮಾಡಿಕೊಂಡು ಬರೋದಾಗಿ ಹೇಳಿದರು. 22 ರಂದು ನಡೆಯುವ ಪ್ರಾಣ ಪ್ರತಿಷ್ಠೆ (Ram Temple Consecration ceremony) ಕಾರ್ಯಕ್ರಮಕ್ಕೆ ತನಗೆ ಆಮಂತ್ರಣ ಸಿಕ್ಕಿಲ್ಲವೆಂದು ಪುನರುಚ್ಛರಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ನವರು ಶ್ರೀರಾಮಚಂದ್ರನನ್ನು ಬಿಜೆಪಿಯವರಿಗಿಂತ ಕಡಿಮೆಯೇನೂ ಪೂಜಿಸಲ್ಲ, ರಾಮ ನಮಗೂ ದೇವರು, ನಾವೆಲ್ಲ ರಾಮನ ಭಕ್ತರು ಎಂದು ಸಿದ್ದರಾಮಯ್ಯ ಹೇಳಿದರು. ತಮಗಾಗಲೀ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕನಿಗೆ ರಾಮಮಂದಿರದ ಬಗ್ಗೆ ಯಾವ ವಿರೋಧವೂ ಇಲ್ಲ, ಆದರೆ ರಾಮ ಮತ್ತು ರಾಮಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಜನವರಿ 22 ರಂದು ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಹತ್ತಿರದ ರಾಮಮಂದಿರಕ್ಕೆ ಹೋಗಿ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.