ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳೋದು ನಮಗೆ ಸಂಬಂಧಿಸದ ವಿಷಯ, ಜನ ನಮ್ಮ ಪರವಾಗಿದ್ದಾರೆ: ಸಿದ್ದರಾಮಯ್ಯ

Updated on: Sep 08, 2023 | 4:03 PM

ಅವರು ಮೈತ್ರಿ ಮಾಡಿಕೊಳ್ಳುತ್ತಾರೋ ಅಥವಾ ಪ್ರತ್ಯೇಕವಾಗಿ ಸ್ಪರ್ಧಿಸುತ್ತಾರೋ ತಮಗೆ ಸಂಬಂಧಿಸದ ವಿಷಯ ಮತ್ತು ಕಾಂಗ್ರೆಸ್ ಅದರ ಬಗ್ಗೆ ಯೋಚಿಸುವ ಅಗತ್ಯವೂ ಇಲ್ಲ, ಎಂದು ಸಿದ್ದರಾಮಯ್ಯ ಹೇಳಿದರು. ನಾವು ಜನರ ಬಳಿಗೆ ಹೋಗಿ ಮತ ಯಾಚಿಸುತ್ತೇವೆ, ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ, ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಂತೆ ಲೋಕ ಸಭಾ ಚುನಾವಣೆಯಲ್ಲೂ ಗೆಲ್ಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಲೋಕ ಸಭಾ ಚುನಾವಣೆಗಾಗಿ (Lok Sabha Polls) ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ 4 ಸೀಟುಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಎರಡು ಪಕ್ಷಗಳ ನಾಯಕರ ನಡುವೆ ಮಾತುಕತೆ ಶುರುವಾಗುತ್ತಿದ್ದಂತೆಯೇ ಕರ್ನಾಟಕದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ಸಹ ಜೋರಾಗಿ ನಡೆಯುತ್ತಿವೆ. ಇದೇ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೊಂದಿಗೆ ಮಾತಾಡಿದಾಗ ಅವರು ತಮ್ಮ ಎಂದಿನ ಡೆವಿಲ್ ಮೇ ಕೇರ್ ಧಾಟಿಯಲ್ಲಿ (devil may care attitude) ಪ್ರತಿಕ್ರಿಯಿಸಿದರು. ಅವರು ಮೈತ್ರಿ ಮಾಡಿಕೊಳ್ಳುತ್ತಾರೋ ಅಥವಾ ಪ್ರತ್ಯೇಕವಾಗಿ ಸ್ಪರ್ಧಿಸುತ್ತಾರೋ ತಮಗೆ ಸಂಬಂಧಿಸದ ವಿಷಯ ಮತ್ತು ಕಾಂಗ್ರೆಸ್ ಅದರ ಬಗ್ಗೆ ಯೋಚಿಸುವ ಅಗತ್ಯವೂ ಇಲ್ಲ, ಎಂದು ಸಿದ್ದರಾಮಯ್ಯ ಹೇಳಿದರು. ನಾವು ಜನರ ಬಳಿಗೆ ಹೋಗಿ ಮತ ಯಾಚಿಸುತ್ತೇವೆ, ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ, ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಂತೆ ಲೋಕ ಸಭಾ ಚುನಾವಣೆಯಲ್ಲೂ ಗೆಲ್ಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More