ಯಾರೇನೇ ಹೇಳಿದರೂ ಮಾರ್ಚ್​ 22ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್ ನಿಲ್ಲಿಸಲಾಗದು: ವಾಟಾಳ್ ನಾಗರಾಜ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 03, 2025 | 3:48 PM

ಇತ್ತೀಚಿಗೆ ಕೆಲವರು ಕನ್ನಡ ಪರ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತಾಡುತ್ತಿದ್ದಾರೆ, ತಾವು ಆಚರಿಸುತ್ತಿರುವ ಬಂದ್​ ಅನ್ನು ನಾನ್ಸೆನ್ಸ್ ಅನ್ನುತ್ತಾರೆ, ಮಾತಾಡುವವರು ಈಗ ಏನಾಗಿದ್ದಾರೆ ಅಂತ ಗೊತ್ತು, ಅದರೆ ಮೊದಲು ಏನಾಗಿದ್ದರು ಅನ್ನೋದು ಸಹ ಚೆನ್ನಾಗಿ ಗೊತ್ತಿರುವುದರಿಂದ ಅದನ್ನು ತೆರದಿಡಬೇಕಾಗುತ್ತದೆ, 22 ರಂದು ನಡೆಯುವ ಬಂದ್ ಯಾರಿಂದಲೂ ನಿಲ್ಲಿಸಲಾಗದು ಎಂದು ನಾಗರಾಜ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಪ್ರತಿಭಟನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗೊಂದಿಗೆ ಮಾತಾಡಿದ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಯಾರೇನೇ ಹೇಳಿದರೂ ಮಾರ್ಚ್ 22 ರಂದು ಅಖಿಲ ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ, ಅವತ್ತು ರಾಜ್ಯಾದ್ಯಂತ ಬಸ್​​ಗಳ ಓಡಾಟ ಸ್ಥಗಿತಗೊಳ್ಳಲಿದೆ, ಮತ್ತು ಬಿಎಂಆರ್​ಸಿಎಲ್ ಮೆಟ್ರೋ ಪ್ರಯಾಣದ ದರ ಹೆಚ್ಚಿಸಿರುವುದರಿಂದ ರೈಲುಗಳ ಓಡಾಟವನ್ನು ಬಂದ್ ಮಾಡಲಾಗುವುದೆಂದು ಹೇಳಿದರು. ಕನ್ನಡ ಪರ ಸಂಘಟನೆಗಳು ಯಾಕೆ ಬಂದ್ ಕರೆ ನೀಡಿವೆ ಅನ್ನೋದಕ್ಕೆ ವಾಟಾಳ್ ಅವರು 7-8 ಕಾರಣಗಳನ್ನೂ ವಿವರಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಡಿಕೆಶಿ ಹೇಳಿಕೆಗೆ ಸಾರಾ ಗೋವಿಂದು ಉತ್ತರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.