ಬಿಜೆಪಿಯವರು ಹಲಾಲ್ ಬಜೆಟ್ ಅಂತ ಹೇಳಲೇಬೇಕು, ಬೇರೇನು ಹೇಳಲು ಅವರಿಗೆ ಸಾಧ್ಯ? ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2025 | 11:45 AM

ನೀರಾವರಿ ಇಲಾಖೆಗೆ ಕಡಿಮೆ ಅನುದಾನವೇನೂ ಸಿಕ್ಕಿಲ್ಲ, ಕಳೆದ ಸಲಕ್ಕಿಂತ ₹ 2,000 ಕೋಟಿ ಹೆಚ್ಚು ಹಣವನ್ನು ಸಿಎಂ ಸಿದ್ದರಾಮಯ್ಯ ಒದಗಿಸಿದ್ದಾರೆ, ಇಲಾಖೆಗೆ ಹಣಕಾಸಿನ ಕೊರತೆ ಎದುರಾಗುವ ನಿರೀಕ್ಷೆ ಇದೆ, ಅದಕ್ಕಾಗಿ ಬೇರೆ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದ ಶಿವಕುಮಾರ್ ಬೆಂಗಳೂರು ವಿವಿಗೆ ಡಾ ಮನಮೋಹನ್ ಸಿಂಗ್ ಹೆಸರಿಟ್ಟಿದ್ದನ್ನು ಸಮರ್ಥಿಸಿಕೊಂಡರು.

ಬೆಂಗಳೂರು, ಮಾರ್ಚ್ 8: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಂಡಿಸಿದ ಬಜೆಟ್ ಅನ್ನು ಬಿಜೆಪಿಯವರು ಹಲಾಲ್ ಬಜೆಟ್ ಅನ್ನುವುದಾದರೆ ಅಂದುಕೊಳ್ಳಲಿ, ಅವರು ಹಾಗೆ ಹೇಳಲೇಬೇಕು, ಯಾಕೆಂದರೆ ಅವರು ಬಜೆಟ್ ನ ಕಣ್ಣಾರೆ ನೋಡಿದ್ದಾರೆ ಮತ್ತು ಕಿವಿಯಿಂದ ಕೇಳಿಸಿಕೊಂಡಿದ್ದಾರೆ, ಕಿವಿ, ಕಣ್ಣುಗಳಿಂದ ಸುಳ್ಳು ಹೇಳಲಾಗಲ್ಲ, ಬಾಯಿಂದ ಹೇಳಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು, ಅವರೇನೇ ಹೇಳಿದರೂ ಬೆಂಗಳೂರನ್ನು ತಮ್ಮ ಸರ್ಕಾರ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತದೆ ಎಂದು ಅವರು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Karnataka Budget 2025; ಸಿದ್ದರಾಮಯ್ಯ ಒಂದು ಐತಿಹಾಸಿಕ ಮತ್ತು ಜನಪರ ಬಜೆಟ್ ಮಂಡಿಸಿದ್ದಾರೆ: ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.