ಆರೋಪ ಮಾಡುತ್ತಿರುವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅಂತ ಸರ್ಕಾರಕ್ಕೆ ಚೆನ್ನಾಗಿ ಗೊತ್ತಿದೆ: ಡಿಕೆ ಶಿವಕುಮಾರ್, ಡಿಸಿಎಂ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Aug 10, 2023 | 1:54 PM

ಗುತ್ತಿಗೆದಾರರು ಯಾರಲ್ಲಿಗಾದರೂ ಹೋಗಲಿ, ತಮ್ಮದೇನೂ ಅಭ್ಯಂತರವಿಲ್ಲ, ಅವರು ಮಾಡಿರುವ ಆರೋಪಗಳನ್ನು ತನಿಖೆಗೆ ಆದೇಶಿಸಲಾಗಿದೆ. ಅಕ್ರಮವೆಸಗದ ಗುತ್ತಿಗೆದಾರಿಗೆ ಖಂಡಿತವಾಗಿ ನ್ಯಾಯ ಒದಗಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಬಿಎಂಪಿ ಕಾಮಗಾರಿಗಳಲ್ಲಿ ಭಾರೀ ಅಕ್ರಮಗಳು ನಡೆದಿವೆ ಅಂತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳುತ್ತಿದ್ದರೆ, ಬಿಲ್ ರಿಲೀಸ್ ಮಾಲು ಕಮೀಶನ್ ಕೇಳಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಸೇರಿದಂತೆ ಹಲವಾರು ಕಾಂಟ್ರ್ಯಾಕ್ಟರ್ ಗಳು ಆರೋಪಿಸುತ್ತಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಗುತ್ತಿಗೆದಾರರು (contractors) ಮಾಡುತ್ತಿರುವ ಆರೋಪ ಮತ್ತು ದೂರುಗಳನ್ನು ತೆಗೆದುಕೊಂಡು ವಿರೋಧ ಪಕ್ಷದ ನಾಯಕರ ಬಳಿಗೆ ಹೋಗುತ್ತಿರುವುದನ್ನು ಸೀರಿಯಸ್ಸಾಗಿ ತೆಗೆದುಕೊಳ್ಳದೆ, ಗುತ್ತಿಗೆದಾರರು ಯಾರಲ್ಲಿಗಾದರೂ ಹೋಗಲಿ, ತಮ್ಮದೇನೂ ಅಭ್ಯಂತರವಿಲ್ಲ, ಅವರು ಮಾಡಿರುವ ಆರೋಪಗಳನ್ನು ತನಿಖೆಗೆ ಆದೇಶಿಸಲಾಗಿದೆ. ಅಕ್ರಮವೆಸಗದ ಗುತ್ತಿಗೆದಾರಿಗೆ ಖಂಡಿತವಾಗಿ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು. ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಯಾಕೆ ಅವರಿಂದ ಆರೋಪ ಮಾಡಿಸಲಾಗುತ್ತಿದೆ ಅಂತ ತಮಗೆ ಚೆನ್ನಾಗಿ ಗೊತ್ತಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 10, 2023 01:25 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.