ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಬೀಡಿ-ಸಿಗರೇಟು ಸೇದುತ್ತೇವೆ: ಸಿದ್ದರಾಮಯ್ಯ, ಸಿಎಂ

ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಬೀಡಿ-ಸಿಗರೇಟು ಸೇದುತ್ತೇವೆ: ಸಿದ್ದರಾಮಯ್ಯ, ಸಿಎಂ
|

Updated on: Jul 01, 2024 | 4:44 PM

ಇವತ್ತಿನ ವೈದ್ಯರಿಗೆ ಡಾ ಬಿಸಿ ರಾಯ್ ಅವರಂತೆ ಬದುಕು ನಡೆಸುವುದು ಸಾಧ್ಯವಾಗದಿದ್ದರೂ ಅವರ ಹಾಕಿಕೊಟ್ಟಿರುವ ಮಾರ್ಗದಲ್ಲಿ ನಡೆಯುವ ಪ್ರಯತ್ನವನ್ನಂತೂ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಮಾಜಕ್ಕೆ ವೈದ್ಯರು ನೀಡುವ ಸೇವೆ ಪದಗಳಲ್ಲಿ ಹೇಳಲಾಗದಂಥದ್ದು, ಅವರಿಂದಾಗೇ ನಾವು ಆರೋಗ್ಯದಿಂದಿರುವುದು ಸಾಧ್ಯ ಎಂದು ಅವರು ಹೇಳಿದರು.

ಬೆಂಗಳೂರು: ವಿಶ್ವ ವೈದ್ಯರ ದಿನಾಚರಣೆಯಾಗಿರುವ ಇಂದು ನಗರದ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಡಾ ಬಿಸಿ ರಾಯ್ ಜನ್ಮದಿನಾಚರಣೆ ಅಂಗವಾಗಿ ನಡೆಯುವ ದಿನದ ಬಗ್ಗೆ ಮಾತಾಡಿದರು. ಎಲ್ಲರೂ ಅರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ದುಶ್ಚಟಗಳಿಗೆ ಬಲಿಯಾಗಬಾರದೆಂದು ಹೇಳಿದ ಸಿದ್ದರಾಮಯ್ಯ, ಸರಿಯಾದ ಆಹಾರ ಪದ್ಧತಿ ಮತ್ತು ಸೂಕ್ತ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಆರೋಗ್ಯ ಮತ್ತು ಆಯುಷ್ಯವಂತರಾಗಿ ಬಾಳಬಹುದು ಎಂದು ಹೇಳಿದರು. ಕೆಟ್ಟ ಚಟಗಳಿಗೆ ಬೇಗ ದಾಸರಾಗುವುದು ಮಾನವನ ದೌರ್ಬಲ್ಯ, ಅವು ನಮ್ಮ ದೇಹಕ್ಕೆ ಮಾರಕ, ಹಾನಿಕಾರಕ ಎಂದು ಗೊತ್ತಿದ್ದರೂ ಅವುಗಳ ಅಭ್ಯಾಸ ನಾವು ನಿಲ್ಲಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಸಿಗರೇಟು ಸೇದುತ್ತಿದ್ದ ತಮ್ಮ ಚಟದ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ಧೂಮಪಾನದಿಂದ ಹೃದ್ರೋಗ ಶುರುವಾದಾಗ 1987 ರಲ್ಲಿ ಅದನ್ನು ತ್ಯಜಿಸಿದೆ ಎಂದು ಹೇಳಿದರು. 24 ವರ್ಷಗಳ ಹಿಂದೆ ಅಂದರೆ 2000 ಌಂಜಿಯೋಪ್ಪಾಸ್ಟಿ ಮಾಡಿಸಿಕೊಂಡಿರುವುದಾಗಿ ಹೇಳಿದ ಸಿದ್ದರಾಮಯ್ಯ ಸಿಗರೇಟು ಸೇದುತ್ತಿದ್ದ ಕಾರಣಕ್ಕೆ ಹೃದ್ರೋಗ ಬಂತು ಮತ್ತು ಅದರೊಂದಿಗೆ ಮಧುಮೇಹ ಸಹ ವಕ್ಕರಿಸಿಕೊಂಡಿತು ಎಂದು ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: 

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ