ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಅಂತ ಕುಮಾರಸ್ವಾಮಿಯನ್ನು ಕೇಳಬೇಕಿತ್ತೇ? ಚಲುವರಾಯಸ್ವಾಮಿ

Updated on: Aug 29, 2025 | 12:48 PM

ಶಿವಕುಮಾರ್ ಅವರನ್ನು ಭೇಟಿ ಹಿನ್ನೆಲೆ ಬಗ್ಗೆ ಕೇಳಿದಾಗ, ಅವರು ರಾಜ್ಯದ ಉಪ ಮುಖ್ಯಮಂತ್ರಿ, ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಸಚಿವರು, ಬೆಂಗಳೂರು ನಗರಾಭವೃದ್ಧಿ ಸಚಿವರು ಮತ್ತು ನೀರಾವರಿ ಖಾತೆ ಸಚಿವರು ಕೂಡ ಹೌದು, ಅವರ ಬಳಿ ಏನಾದರೂ ಕೆಲಸ ಇದ್ದೇ ಇರುತ್ತದೆ, ಕೃಷಿ ಮತ್ತು ಹೇಮಾವತಿ ಜಲಾಶಯಕ್ಕೆ ಸಂಬಂಧಿಸಿದಂತೆ ಕೆಲ ಕೆಲಸಗಳಿದ್ದವು, ಹಾಗಾಗಿ ಅವರನ್ನು ಕಾಣಲು ಬಂದಿದ್ದು ಎಂದು ಚಲುವರಾಯಸ್ವಾಮಿ ಹೇಳಿದರು.

ಬೆಂಗಳೂರು, ಆಗಸ್ಟ್ 29: ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟನೆಯನ್ನು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮಾಡುತ್ತಿರುವ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಟೀಕಿಸಿರುವುದನ್ನು ರಾಜ್ಯ ಕೃಚಿ ಸಚಿವ ಎನ್ ಚಲುವರಾಯಸ್ವಾಮಿ ಗಮನಕ್ಕೆ ತಂದಾಗ, ಜಾತಿಯನ್ನು ಮುಂದೆ ಮಾಡಿಕೊಂಡು ಯಾವ ಕೆಲಸವನ್ನೂ ಮಾಡಲಾಗಲ್ಲ, ದಸರಾ ಮಹೋತ್ಸವ ಯಾರಿಂದ ಉದ್ಘಾಟಿಸಬೇಕು ಅಂತ ಕುಮಾರಸ್ವಾಮಿಯವರನ್ನು ಕೇಳುತ್ತಾ ಕೂರಲಾಗಲ್ಲ, ಕುಮಾರಸ್ವಾಮಿ ಬಾಯಿ ಚಪಲಕ್ಕೆ ಮಾತಾಡುತ್ತಾರೋ ಮತ್ಯಾವುದಕ್ಕೆ ಮಾತಾಡುತ್ತಾರೋ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಬಂದಿದ್ದ ಸಚಿವ ಹೇಳಿದರು.

ಇದನ್ನೂ ಓದಿ:  ಚಿತ್ರದುರ್ಗದ ರೈತ ರಾಜಣ್ಣ ಗೋಳು ಮಂಡ್ಯದಿಂದ ಆಚೆಬಾರದ ಕೃಷಿ ಸಚಿವ ಚಲುವರಾಯಸ್ವಾಮಿಗೆ ಕೇಳಿಸೀತೇ?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More