ಪೆಟ್ರೋಲ್ ರೂ. 250/ಲೀ, ಹಾಲು ರೂ. 300/ಲೀ ಮಾರಾಟವಾಗುತ್ತಿರುವ ಪಾಕಿಸ್ತಾನದ ಜೊತೆ ಭಾರತವನ್ನು ರಮ್ಯಾ ಯಾಕೆ ಹೋಲಿಸಿದರೋ? ಸಿಟಿ ರವಿ

Updated on: Feb 01, 2023 | 11:45 AM

ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಭಾರತದಲ್ಲಿ ಹಣದುಬ್ಬರ ಪ್ರಮಾಣ ಶೇಕಡ 9 ರಷ್ಟಿತ್ತು ಈಗ ಅದು ಕೇವಲ ಶೇಕಡ 4ರಷ್ಟಿದೆ, ಎಂದು ರವಿ ಹೇಳಿದರು.

ಚಿಕ್ಕಮಗಳೂರು: ಕಾಂಗ್ರೆಸ್ ಕಾರ್ಯಕರ್ತೆ ಮತ್ತು ಚಿತ್ರನಟಿ ರಮ್ಯಾ (Ramya) ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಕೇಂದ್ರ ಬಜೆಟ್ ಮಂಡನೆ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಟಿವಿ9 ಜಿಲ್ಲಾ ವರದಿಗಾರನೊಂದಿಗೆ ಮಾತಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಶಾಸಕ ಸಿಟಿ ರವಿ (CT Ravi) ಅವರು, ಅದ್ಯಾವ ಕಾರಣಕ್ಕೆ ರಮ್ಯಾ ಅವರು ನಮ್ಮ ದೇಶವನ್ನು ಪಾಕಿಸ್ತಾನಕ್ಕೆ (Pakistan) ಹೋಲಿಸಿದರೋ ಅರ್ಥವಾಗುತ್ತಿಲ್ಲ, ನೆರೆ ದೇಶದಲ್ಲಿ ಪೆಟ್ರೋಲ್ ಪ್ರತಿ ಲೀಟರ್ ರೂ. 250, ಹಾಲು ಪ್ರತಿಲೀಟರ್ ಗೆ ರೂ. 300 ರಂತೆ ಮಾರಾಟವಾಗುತ್ತಿವೆ. ಪಾಕಿಸ್ತಾನ, ಶ್ರೀಲಂಕಾ, ಚೀನಾ, ಅಮೆರಿಕ ಮೊದಲಾದ ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಹಣದುಬ್ಬರ ಪ್ರಮಾಣ ಕಡಿಮೆ ಇದೆ. ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಭಾರತದಲ್ಲಿ ಹಣದುಬ್ಬರ ಪ್ರಮಾಣ ಶೇಕಡ 9 ರಷ್ಟಿತ್ತು ಈಗ ಅದು ಕೇವಲ ಶೇಕಡ 4ರಷ್ಟಿದೆ, ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More