ವರ್ತೂರು ಸಂತೋಷ್ ಜಾಮೀನು ಕೋರಿ ಮನವಿ ಸಲ್ಲಿಸಲಾಗಿದ್ದು ಬುಧವಾರ ವಿಚಾರಣೆ ನಡೆಯಲಿದೆ: ನಟರಾಜ, ಸಂತೋಷ್ ವಕೀಲ

ಅರುಣ್​ ಕುಮಾರ್​ ಬೆಳ್ಳಿ

Updated on: Oct 23, 2023 | 7:15 PM

ಅಸಲಿಗೆ ಹುಲಿಯುಗುರಿನ ಪೆಂಡೆಂಟ್ ಬಳಸುವುದು, ಧರಿಸುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅಪರಾಧ ಅಂತ ಅವರಿಗೆ ಗೊತ್ತಿರಲಿಲ್ಲ ಎಂದು ನಟರಾಜ್ ಹೇಳಿದರು. ಸಂತೋಷ್ ಅವರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು ಅದರ ವಿಚಾರಣೆ ಬುಧವಾರ ನಡೆಯಲಿದೆ ಎಂದು ವಕೀಲ ನಟರಾಜ್ ಹೇಳಿದರು.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿಗಳಲ್ಲೊಬ್ಬರಾಗಿದ್ದ ವರ್ತೂರು ಸಂತೋಷ್ (Varthur Santosh) ಅವರನ್ನು ಹುಲಿಯುಗುರಿನ ಪೆಂಡೆಂಟ್ (tiger claw pendant) ಧರಿಸಿದ ಆರೋಪದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ (Wildlife Protection Act) ಬಂಧಿಸಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ಕಸ್ಟಡಿಗೆ (judicial custody) ಒಪ್ಪಿಸಲಾಗಿದೆ. ಸಂತೋಷ್ ರನ್ನು ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸಿದಾಗ ಅವರ ಪರ ವಾದಿಸಿದ ಅಡ್ವೋಕೇಟ್ ನಟರಾಜ್ ಹೇಳುವ ಪ್ರಕಾರ ಅವರ ಕಕ್ಷಿದಾರ ಸುಮಾರು 3-4 ವರ್ಷಗಳ ಹಿಂದೆ ತಮಿಳುನಾಡುಗೆ ಹೋಗಿದ್ದಾಗ ಹೊಸೂರು-ಧರ್ಮಪುರಿ ನಡುವೆ ಯಾವುದೋ ಒಂದು ಭಾಗದಲ್ಲಿ ಅದನ್ನು ತಗೊಂಡಿದ್ದಾರಂತೆ. ಅಸಲಿಗೆ ಹುಲಿಯುಗುರಿನ ಪೆಂಡೆಂಟ್ ಬಳಸುವುದು, ಧರಿಸುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅಪರಾಧ ಅಂತ ಅವರಿಗೆ ಗೊತ್ತಿರಲಿಲ್ಲ ಎಂದು ನಟರಾಜ್ ಹೇಳಿದರು. ಸಂತೋಷ್ ಅವರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು ಅದರ ವಿಚಾರಣೆ ಬುಧವಾರ ನಡೆಯಲಿದೆ ಎಂದು ವಕೀಲ ನಟರಾಜ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.