AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಲ್ಲಿನ ಅಕ್ರಮಗಳ ತನಿಖೆಗೆ ಎಸ್​ಐಟಿ ರಚಿಸಿಲ್ಲ, ಕೆಲ ಪ್ರಶ್ನೆಗಳಿಗೆ ಸಂಬಂಧಪಟ್ಟವರು ಉತ್ತರ ನೀಡಲಿ, ಅಷ್ಟೇ: ಡಿಕೆ ಶಿವಕುಮಾರ್

ಬಿಬಿಎಂಪಿಯಲ್ಲಿನ ಅಕ್ರಮಗಳ ತನಿಖೆಗೆ ಎಸ್​ಐಟಿ ರಚಿಸಿಲ್ಲ, ಕೆಲ ಪ್ರಶ್ನೆಗಳಿಗೆ ಸಂಬಂಧಪಟ್ಟವರು ಉತ್ತರ ನೀಡಲಿ, ಅಷ್ಟೇ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 07, 2023 | 7:29 PM

Share

ಕೆಲವು ಕಾಮಗಾರಿಗಳ ಬಿಲ್ ರೂ. 2 ಕೋಟಿ ಇದ್ದರೆ 1.99 ಕೋಟಿ ರೂ, ಬಿಡುಗಡೆ ಮಾಡಿ ಕೇವಲ 1 ಲಕ್ಷ ರೂ. ಮಾತ್ರ ಬಾಕಿ ಉಳಿಸಿದ್ದಾರೆ, ಅದು ಯಾಕೆ ಹಾಗೆ ಅಂತ ತನಗೆ ಅರ್ಥವಾಗಿಲ್ಲ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಹಿಂದಿನ ಸರಕಾರ ಅವಧಿಯಲ್ಲಿ ಬೃಹತ್ ಬೆಂಗಳೂರು ನಗರ ಪಾಲಿಕೆಯಲ್ಲಿ (BBMP) ನಡೆದ ಕಾಮಗಾರಿಗಳಲ್ಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ತಾನು ಯಾವುದೇ ವಿಶೇಷ ತನಿಖಾ ದಳ (ಎಸ್ ಐಟಿ) (SIT) ರಚಿಸಿಲ್ಲವೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು, ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಕೆಲಸ ನಡೆದಿವೆ, ಟೆಂಡರ್ ಕರೆದಿದ್ದು ಯಾವಾಗ, ಕಾಮಗಾರಿ ಪೂರ್ಣಗೊಂಡಿದ್ದು ಯಾವಾಗ, ಕಾಮಗಾರಿ ಶುರುಮಾಡುವ ಮೊದಲು ಗುಂಡಿಗಳಿದ್ದವೇ ಅವುಗಳ ವಿಡಿಯೋ ರೆಕಾರ್ಡಿಂಗ್ ಮಾಡಲಾಗಿದೆಯೇ? ಕಾಮಗಾರಿ ನಡೆಯುವಾಗ ಮುಗಿದಾಗ ಇನ್ಸ್ ಪೆಕ್ಷನ್ ಮಾಡಲಾಗಿದೆಯೇ ಮೊದಲಾದ ಪ್ರಶ್ನೆಗಳನ್ನು ತಾವು ಎತ್ತಿರುವುದಾಗಿ ಹೇಳಿದ ಶಿವಕುಮಾರ್ ಸಂಬಂಧಪಟ್ಟವರು ಉತ್ತರಿಸಲಿ ಎಂದರು. ಕೆಲವು ಕಾಮಗಾರಿಗಳ ಬಿಲ್ ರೂ. 2 ಕೋಟಿ ಇದ್ದರೆ 1.99 ಕೋಟಿ ರೂ, ಬಿಡುಗಡೆ ಮಾಡಿ ಕೇವಲ 1 ಲಕ್ಷ ರೂ. ಮಾತ್ರ ಬಾಕಿ ಉಳಿಸಿದ್ದಾರೆ, ಅದು ಯಾಕೆ ಹಾಗೆ ಅಂತ ತನಗೆ ಅರ್ಥವಾಗಿಲ್ಲ ಎಂದು ಶಿವಕುಮಾರ್ ಹೇಳಿದರು. ಪತ್ರಕರ್ತರೊಬ್ಬರು ಹೆಚ್ ಡಿ ಕುಮಾರಸ್ವಾಮಿ ಮಾಡಿದ ಆರೋಪಗಳ ಬಗ್ಗೆ ಕೇಳಿದಾಗ ಅವರದ್ದು ಬಿಡಿ, ಅವರಷ್ಟು ಅನುಭವ ತನಗಿಲ್ಲ ಎಂದು ಶಿವಕುಮಾರ್ ವ್ಯಂಗ್ಯವಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.