ಯತ್ನಾಳ್ ಟಿಪ್ಪೂ ಖಡ್ಗ ಹಿಡಿದು ಕುಣಿದಾಡಿದ, ಇಫ್ತಿಯಾರ್ ಕೂಟ ನಡೆಸಿದ ಫೋಟೋಗಳು ನಮ್ಮಲ್ಲಿವೆ: ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 08, 2025 | 8:07 PM

ಬೇರೆಯವರನ್ನು ಪೇಮೆಂಟ್ ಗಿರಾಕಿ, ಹೊಂದಾಣಿಕೆ ರಾಜಾಕಾರಣಿ ಎನ್ನುವ ಬಸನಗೌಡ ಯತ್ನಾಳ್ ಖುದ್ದು ಒಬ್ಬ ಅಡ್ಜಸ್ಟ್​ನೆಂಟ್ ರಾಜಕಾರಣಿ, ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ನಗರದಿಂದ ಯಾವಾಗಲೂ ಬಿಜೆಪಿಗೆ ಲೀಡ್ ಸಿಗುತಿತ್ತು, ಅದರೆ ಈ ಸಲ ಕಾಂಗ್ರೆಸ್ ಪಕ್ಷಕ್ಕೆ 9,000 ಕ್ಕಿಂತ ಹೆಚ್ಚು ಮತಗಳಷ್ಟು ಲೀಡ್ ದೊರಕಿದೆ, ಇದಕ್ಕೆ ಕಾರಣ ಯತ್ನಾಳ್​ನ ಹೊಂದಾಣಿಕೆ ರಾಜಕಾರಣ ಎಂದು ರೇಣುಕಾಚಾರ್ಯ ಹೇಳಿದರು.

ದಾವಣಗೆರೆ, ಏಪ್ರಿಲ್ 8: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ( M) Renukacharya) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ರನ್ನು ಟೀಕಿಸುವುದು ಮುಂದುವರಿಸಿದ್ದಾರೆ. ಏಕವಚನದಲ್ಲೇ ಯತ್ನಾಳ್ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಅವನೊಬ್ಬ ಸ್ವಯಂ ಘೋಷಿತ ಹಿಂದೂ ಹುಲಿ, ಅಸಲಿಗೆ ಅವನು ನಕಲಿ ಹಿಂದೂ ಹುಲಿ, ಹಿಂದೂತ್ವದ ಪ್ರತಿಪಾದಕನೇ ಆಗಿದ್ದರೆ ಜೆಡಿಎಸ್ ಗೆ ಯಾಕೆ ಹೋಗುತ್ತಿದ್ದ? ಗೋಪಾಲ್ ಜೀ ಅವರನ್ನು ಯಾಕೆ ಟೀಕಿಸುತ್ತಿದ್ದ? ಅವನು ಟಿಪ್ಪೂ ಖಡ್ಗ ಹಿಡಿದು ಡ್ಯಾನ್ಸ್ ಮಾಡಿದ್ದು, ಟೋಪಿ ಧರಿಸಿ ಇಫ್ತಿಯಾರ್ ಕೂಟ ನಡೆಸಿದ್ದು, ಬಿರಿಯಾನಿ ತಿಂದಿದ್ದು-ಎಲ್ಲ ಫೋಟೋಗಳು ತಮ್ಮ ಬಳಿ ಇವೆ ಎಂದು ರೇಣುಕಾಚಾರ್ಯ ಹೇಳಿದರು.

ಇದನ್ನೂ ಓದಿ: ಯತ್ನಾಳ್​​​ ಉಚ್ಛಾಟನೆಗೆ ಯಡಿಯೂರಪ್ಪ ಕಾರಣ, ಬಿಜೆಪಿಯಲ್ಲಿನ ಪಂಚಮಸಾಲಿ ನಾಯಕರು ಪಕ್ಷದಿಂದ ಹೊರಬನ್ನಿ: ಸ್ವಾಮೀಜಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Apr 08, 2025 08:05 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.