ಅಕ್ಕಿಗೆ ಸಂಬಂಧಿಸಿದಂತೆ ತೆಲಂಗಾಣ ಮತ್ತು ಛತ್ತೀಸ್​ಗಡ್ ಸರ್ಕಾರಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ: ಕೆ ಹೆಚ್ ಮುನಿಯಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jun 17, 2023 | 4:58 PM

ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಪ್ರದರ್ಶಿಸಿದೆ, ದುಡ್ಡು ಸಂದಾಯ ಮಾಡುವುದಾಗಿ ಹೇಳಿದರೂ ಅಕ್ಕಿ ಕೊಡಲು ತಯಾರಿಲ್ಲ ಎಂದು ಸಚಿವರು ಹೇಳಿದರು.

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ (Anna Bhagya scheme) ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಗಳಿಗೆ ಹತ್ತತ್ತು ಕೆಜಿ ಅಕ್ಕಿ ಒದಗಿಸುವ ವ್ಯವಸ್ಥೆ ಮಾಡಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಸರತ್ತ್ತು ಮುಂದುವರಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಪ್ರದರ್ಶಿಸಿದೆ, ನಮ್ಮ ಸರ್ಕಾರ ದುಡ್ಡು ಸಂದಾಯ ಮಾಡುವುದಾಗಿ ಹೇಳಿದರೂ ಅಕ್ಕಿ ಕೊಡಲು ತಯಾರಿಲ್ಲ ಎಂದು ಹೇಳಿದರು. ಛತ್ತೀಸ್ ಗಡ್, ತೆಲಂಗಾಣ (Telangana) ಮತ್ತು ಪಂಜಾಬ್ ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಯುತ್ತಿದೆ ಮತ್ತು ಅವರಿಂದ ಪಾಸಿಟಿವ್ ಪ್ರತಿಕ್ರಿಯೆ ಬಂದಿದೆ ಎಂದು ಸಚಿವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.