ಪ್ರಜ್ವಲ್ ಬಗ್ಗೆ ಮಾತು ಬೇಡ ಆದರೆ ಎಲ್ಲರೂ ಸಂತ್ರಸ್ತ ಮಹಿಳೆಯರ ಬಗ್ಗೆ ಯೋಚಿಸಬೇಕಿದೆ: ವಾಟಾಳ್ ನಾಗರಾಜ್

ಅರುಣ್​ ಕುಮಾರ್​ ಬೆಳ್ಳಿ

Updated on: May 28, 2024 | 4:03 PM

ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯಲ್ಲಿ ತಮ್ಮ ಅವಕಾಶಗಳ ಮೇಲೆ ಯಾವುದೇ ಪರಿಣಾಮ ಬೀರದು ಎಂದು ನಾಗರಾಜ್ ಹೇಳಿದರು. ಆದರೆ, ಸಂತ್ರಸ್ತ ಮಹಿಳೆಯರ ಬಗ್ಗೆ ನಾವೆಲ್ಲ ಯೋಚನೆ ಮಾಡಬೇಕಿದೆ, ಸರ್ಕಾರ ಅವರ ನೆರವಿಗೆ ಧಾವಿಸಿ ಅವರು ಅನುಭವಿಸುತ್ತಿರುವ ಮಾನಸಿಕ ತೊಳಲಾಟ ಮತ್ತು ಹಿಂಸೆಯಿಂದ ಮುಕ್ತರಾಗಿಸಬೇಕಿದೆ, ಚುನಾವಣೆಯ ಬಳಿಕ ತಾನು ರಾಜ್ಯದಾದ್ಯಂತ ಓಡಾಡಿ ಶೋಷಿತ ಮಹಿಳೆಯಯರ ಪರವಾಗಿ ಧ್ವನಿಯೆತ್ತುವುದಾಗಿ ನಾಗರಾಜ್ ಹೇಳಿದರು.

ಹಾಸನ: ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ವಾಟಾಳ್ ನಾಗರಾಜ್ (Vatal Nagaraj) ಇಂದು ಹಾಸನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡುವಾಗ ಲೈಂಗಿಕ ಹಗರಣಗಳ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ (absconding) ಪ್ರಜ್ವಲ್ ರೇವಣ್ಣ (Prajwal Revanna) ಬಗ್ಗೆ ಮಾತಾಡಲು ನಿರಾಕರಿಸಿದರು. ಅಸಲಿಗೆ ಪ್ರಜ್ವಲ್ ಬಗ್ಗೆ ಕೇಳಿದಾಗ ಅವರು ಗೊಂದಕ್ಕೆ ಬಿದ್ದು ಏನು ಹೇಳಬೇಕೆಂದು ತೋಚದೆ ತೊಳಲಾಟ ಅನುಭವಿಸಿದರು. ಆ ಪ್ರಕರಣದ ಬಗ್ಗೆ ಮಾತಾಡುವುದೇ ಬೇಡ, ಅದು ಒಂದು ಕಡೆಯಿಂದ ಶುರುವಾಗಿ ಮತ್ಯಾವುದೋ ಕಡೆಗೆ ಹೋಗುತ್ತದೆ. ಒಂದು ಪದ ಹೇಳಿದಾಗ ಅದಕ್ಕೆ ಮತ್ತೊಂದು ಸೇರಿಕೊಳ್ಳುತ್ತದೆ, ಎಲ್ಲ ಸೇರಿ ಪ್ರಜ್ವಲ್ ನನ್ನು ಹುತಾತ್ಮ ಮಾಡಲು ಹೊರಟಿದ್ದಾರೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯಲ್ಲಿ ತಮ್ಮ ಅವಕಾಶಗಳ ಮೇಲೆ ಯಾವುದೇ ಪರಿಣಾಮ ಬೀರದು ಎಂದು ನಾಗರಾಜ್ ಹೇಳಿದರು. ಆದರೆ, ಸಂತ್ರಸ್ತ ಮಹಿಳೆಯರ ಬಗ್ಗೆ ನಾವೆಲ್ಲ ಯೋಚನೆ ಮಾಡಬೇಕಿದೆ, ಸರ್ಕಾರ ಅವರ ನೆರವಿಗೆ ಧಾವಿಸಿ ಅವರು ಅನುಭವಿಸುತ್ತಿರುವ ಮಾನಸಿಕ ತೊಳಲಾಟ ಮತ್ತು ಹಿಂಸೆಯಿಂದ ಮುಕ್ತರಾಗಿಸಬೇಕಿದೆ, ಚುನಾವಣೆಯ ಬಳಿಕ ತಾನು ರಾಜ್ಯದಾದ್ಯಂತ ಓಡಾಡಿ ಶೋಷಿತ ಮಹಿಳೆಯಯರ ಪರವಾಗಿ ಧ್ವನಿಯೆತ್ತುವುದಾಗಿ ನಾಗರಾಜ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಾಟಾಳ್ ನಾಗರಾಜ್ ವಿರೋಧ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.