ಬೆಂಗಳೂರಿನ ಟ್ರಾಫಿಕ್ ಜಾಮ್ ನಮ್ಮ ಅಭಿವೃದ್ಧಿಯ ಸಂಕೇತ:ಚರ್ಚೆಗೆ ಗ್ರಾಸವಾಯ್ತು ಪ್ರಿಯಾಂಕ್ ಖರ್ಗೆ ಮಾತು

Updated on: Oct 10, 2025 | 11:03 PM

ಟ್ರಾಫಿಕ್‌ ಸಮಸ್ಯೆ (Traffic Problem) ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ. Mobility Symposium 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆಯ ಸುಮಾರು 75.5 ಪ್ರತಿಶತ ಜನರು ಕೆಲಸ ಮಾಡುವ ಜನಸಂಖ್ಯೆಯ ಭಾಗವಾಗಿದ್ದಾರೆ. ನಾವು ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿದ್ದೇವೆ. ಹಾಗೆ ನೋಡಿದರೆ ಟ್ರಾಫಿಕ್‌ ಸಮಸ್ಯೆ ಒಂದು ಲೆಕ್ಕದಲ್ಲಿ ಒಳ್ಳೆಯದು. ಇದು ನಾವು ಬೆಳೆಯುತ್ತಿದ್ದೇವೆ ಎಂಬುದನ್ನು ತೋರಿಸುತ್ತದೆ. ಆದರೂ ಟ್ರಾಫಿಕ್‌ ಸಮಸ್ಯೆಯನ್ನು ನಾವು ಬಗೆ ಹರಿಸಿಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರು, (ಅಕ್ಟೋಬರ್ 10): ಟ್ರಾಫಿಕ್‌ ಸಮಸ್ಯೆ (Traffic Problem) ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ. Mobility Symposium 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆಯ ಸುಮಾರು 75.5 ಪ್ರತಿಶತ ಜನರು ಕೆಲಸ ಮಾಡುವ ಜನಸಂಖ್ಯೆಯ ಭಾಗವಾಗಿದ್ದಾರೆ. ನಾವು ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿದ್ದೇವೆ. ಹಾಗೆ ನೋಡಿದರೆ ಟ್ರಾಫಿಕ್‌ ಸಮಸ್ಯೆ ಒಂದು ಲೆಕ್ಕದಲ್ಲಿ ಒಳ್ಳೆಯದು. ಇದು ನಾವು ಬೆಳೆಯುತ್ತಿದ್ದೇವೆ ಎಂಬುದನ್ನು ತೋರಿಸುತ್ತದೆ. ಆದರೂ ಟ್ರಾಫಿಕ್‌ ಸಮಸ್ಯೆಯನ್ನು ನಾವು ಬಗೆ ಹರಿಸಿಕೊಳ್ಳಬೇಕು ಎಂದು ಹೇಳಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More