ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಬೇಗ ನಿಲುವು ಪ್ರಕಟಿಸಲಿ ಅಂತ ಮನವಿ ಮಾಡಲಾಗಿದೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 26, 2025 | 4:39 PM

ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆಯೂ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸುವುದು ಬಾಕಿಯುಳಿದುಕೊಂಡಿದೆ, ಅಲಮಟ್ಟಿ ಜಲಾಶಯದ ಎತ್ತರವನ್ನು 526 ಅಡಿಗಳಿಗೆ ಹೆಚ್ಚಿಸಲು ಕರ್ನಾಟಕ ಅನುಮತಿ ಕೋರಿದೆ, ಅನುಮತಿ ಸಿಕ್ಕುತ್ತದೆ ಎಂಬ ಭರವಸೆಯೊಂದಿಗೆ ಕರ್ನಾಟಕ ಪೂರಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಕಾರಣ ಆದಷ್ಟು ಬೇಗ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕೆಂದು ಕೋರಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಫೆ. 26: ನಿನ್ನೆ ಬೆಳ್ಳಂಬೆಳಿಗ್ಗೆಯೇ ದೆಹಲಿಗೆ ತೆರಳಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿಗೆ ವಾಪಸ್ಸಾಗಿದ್ದು ಇಂದು ಸುದ್ದಿಗೋಷ್ಠಿಯಯೊಂದನ್ನು ನಡೆಸಿ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ಮಾಡಿದ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಮೇಕೆದಾಟು ಯೋಜನೆಯ (Mekedatu Project) ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬೇಗ ಪ್ರಕಟಿಸಲಿ, ಕೇಂದ್ರದಿಂದ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ತೊಂದರೆಯಾಗುವುದು ಬೇಡವೆಂದು ತಾನು ಕೇಂದ್ರಕ್ಕೆ ತಿಳಿಸಿದ್ದಾಗಿ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Mekedatu Project: ಮೇಕೆದಾಟು ಯೋಜನೆ ಪರಿಶೀಲಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ ಕರ್ನಾಟಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.