Assembly Polls: ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ

Updated on: Jan 20, 2023 | 5:31 PM

ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲಬಹುದಾದ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಟಿಕೆಟ್ ನೀಡಲಾಗುವುದು ಎಂದು ರೆಡ್ಡಿ ಹೇಳಿದರು.

ಕೊಪ್ಪಳ: ನಗರದಲ್ಲಿಂದು ತಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲೆಲ್ಲಿಂದ ಸ್ಪರ್ಧಿಸಲಿದ್ದರೆ ಎನ್ನುವ ಬಗ್ಗೆ ಒಂದು ಚಿಕ್ಕ ವಿವರಣೆ ನೀಡಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು, ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಅಂತ ಸ್ಪಷ್ಟಪಡಿಸಿದರು. ಕೆಅರ್ ಪಿಪಿ (KRPP) ಅಭ್ಯರ್ಥಿಗಳು, ಕೊಪ್ಪಳ (Koppal), ಬಾಗಲಕೋಟೆ, ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಮತಕ್ಷೇತ್ರಗಳಿಂದ ಸ್ಪರ್ಧಿಸುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ತಮ್ಮ ಕೈ ಸೇರಿದೆ. ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲಬಹುದಾದ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಟಿಕೆಟ್ ನೀಡಲಾಗುವುದು ಎಂದು ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 20, 2023 02:44 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.