ಲೋಕ ಸಭಾ ಚುನಾವಣೆಗೆ ಮೊದಲು ಪಕ್ಷವನ್ನು ಸಂಘಟಿಸಿ ಪುನಶ್ಚೇತನಗೊಳಿಲಾಗುವುದು: ಜಿಟಿ ದೇವೇಗೌಡ, ಜೆಡಿಎಸ್ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Sep 16, 2023 | 2:10 PM

ಜೆಡಿಎಸ್ ಪಕ್ಷ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಪ್ರಭಾವಶಾಲಿಯಾಗಿರದ ಕಾರಣ ಕೋರ್ ಕಮಿಟಿಯು ಇದೇ ತಿಂಗಳು ಕಲಬುರಗಿ, ಹೊಸಪೇಟೆ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲಿ ಒಂದೊಂದು ಸಭೆ ನಡೆಸಲಿದೆಯೆಂದು ಶಾಸಕ ಹೇಳಿದರು. ಹೆಚ್ ಡಿ ದೇವೇಗೌಡರು ಕಟ್ಟಿರುವ ಪ್ರಾದೇಶಿಕ ಪಕ್ಷದ ಮೇಲೆ ಜನಕ್ಕೆ ವಿಶ್ವಾಸವಿದೆ ಎಂದು ಜಿಟಿ ದೇವೇಗೌಡ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರನೊಂದಿಗೆ ಮಾತಾಡಿದ ಜೆಡಿಎಸ್ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡ (GT Devegowda) ಲೋಕ ಸಭಾ ಚುನಾವಣೆಗೆ ಮೊದಲು ಪಕ್ಷವನ್ನು ಸಂಘಟಿಸಿ, ಪುನಶ್ಚೇತನಗೊಳಿಸುವುದರ ಜೊತೆಗೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿಯೊಂದನ್ನು (core committee) ರಚಿಸಲಾಗಿದ್ದು ಈ ಸಮಿತಿ ರಾಜ್ಯದಾದ್ಯಂತೆ ಪ್ರವಾಸ ಮಾಡಿ ಮತ್ತು ವಿಭಾಗೀಯ ಮಟ್ಟದಲ್ಲಿ, ಜಿಲ್ಲಾಮಟ್ಟದದಲ್ಲಿ ನೂತನ ಪದಾಧಿಕಾರಿಗಳನ್ನು (office bearers) ನೇಮಕ ಮಾಡಲಿದೆಯಂತೆ. ಜೆಡಿಎಸ್ ಪಕ್ಷ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಪ್ರಭಾವಶಾಲಿಯಾಗಿರದ ಕಾರಣ ಕೋರ್ ಕಮಿಟಿಯು ಇದೇ ತಿಂಗಳು ಕಲಬುರಗಿ, ಹೊಸಪೇಟೆ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲಿ ಒಂದೊಂದು ಸಭೆ ನಡೆಸಲಿದೆಯೆಂದು ಶಾಸಕ ಹೇಳಿದರು. ಹೆಚ್ ಡಿ ದೇವೇಗೌಡರು ಕಟ್ಟಿರುವ ಪ್ರಾದೇಶಿಕ ಪಕ್ಷದ ಮೇಲೆ ಜನಕ್ಕೆ ವಿಶ್ವಾಸವಿದೆ ಎಂದು ಜಿಟಿ ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.