AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಕಾರ್ಡುಗಳನ್ನು ಮೊದಲಿದ್ದ ಹಾಗೆ ಬಡವರಿಗೆ ಹಿಂತಿರುಗಿಸದಿದ್ದರೆ ಉಗ್ರ ಹೋರಾಟ: ಆರ್​. ಅಶೋಕ

ಬಿಪಿಎಲ್ ಕಾರ್ಡುಗಳನ್ನು ಮೊದಲಿದ್ದ ಹಾಗೆ ಬಡವರಿಗೆ ಹಿಂತಿರುಗಿಸದಿದ್ದರೆ ಉಗ್ರ ಹೋರಾಟ: ಆರ್​. ಅಶೋಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Nov 21, 2024 | 4:01 PM

Share

ಬಡವರಿಗೆ ಅನ್ನ ಕೊಡಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 2 ಕೋಟಿ ಖರ್ಚು ಮಾಡಿ ತಮ್ಮ ಕಚೇರಿಯನ್ನು ರಿನೋವೇಟ್ ಮಾಡಿಸಿಕೊಳ್ಳುತ್ತಾರೆ, ಸಚಿವರ ಬಂಗ್ಲೆಗಳ ಸೌಂದರ್ಯೀಕರಣಕ್ಕಾಗಿ ₹ 40-50 ಕೋಟಿ ಖರ್ಚು ಮಾಡಲಾಗಿದೆ, ಬಿಪಿಎಲ್ ಕಾರ್ಡ್ ರದ್ದು ಕೆಲಸ ನಿಲ್ಲದೆ ಹೋದರೆ, ವಿಧಾನಸೌಧವೂ ಸೇರಿದಂತೆ ಎಲ್ಲ ಸರ್ಕಾರೀ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಅಶೋಕ ಹೇಳಿದರು.

ಬೆಂಗಳೂರು: ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಿರುವ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದಲ್ಲಿ ಬಿಜೆಪಿ ಅಭಿಯಾನ ಮುಂದುವರಿದಿದೆ. ಜಯನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಶೋಕ, ಬಂಡಾಯವೆದ್ದಿರುವ ಶಾಸಕರ ಕ್ಷೇತ್ರಗಳಿಗೆ ಅನುದಾನ ಒದಗಿಸಲು ಸರ್ಕಾರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡುವ ಕೆಲಸ ಶುರುಮಾಡಿದೆ, ಆದರೆ ನಾವು ಸರ್ಕಾರಕ್ಕೆ ಎಚ್ಚರಿಕೆ ಕೊಡ್ತೇವೆ, ವಿಧಾನಸಭೆಯ ಚಳಿಗಾಲದ ಅಧಿವೇಶನ ಶುರುವಾಗುವ ಮೊದಲು ರದ್ದು ಮಾಡಿರುವ ಬಿಪಿಎಲ್ ಕಾರ್ಡ್​​ಗಳನ್ನು ಬಡವರಿಗೆ ಮೊದಲಿಬ ಸ್ಥಿತಿಯಲ್ಲಿ ವಾಪಸ್ಸು ಮಾಡಬೇಕು, ಹೊಸದಾಗಿ ಅರ್ಜಿ ಸಲ್ಲಿಸುವಂತೆ ಹೇಳಬಾರದು, ಇದನ್ನು ಸರ್ಕಾರ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Published on: Nov 21, 2024 03:59 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.