AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್

ವಿವೇಕ ಬಿರಾದಾರ
|

Updated on: Jun 22, 2025 | 10:01 PM

Share

ಬೆಂಗಳೂರಿನಲ್ಲಿ ರವಿವಾರ ಸಂಜೆ ಭಾರಿ ಮಳೆಯಾಗಿದೆ. ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಜಯನಗರ ಮುಂತಾದ ಹಲವು ಪ್ರದೇಶಗಳಲ್ಲಿ ನೀರು ನಿಂತಿದೆ. ಮಳೆಯಿಂದ ಬೀದಿ ವ್ಯಾಪಾರಿಗಳು ಮತ್ತು ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಕಳೆದ ಎರಡು ದಿನಗಳ ನಂತರ ಮತ್ತೆ ಮಳೆ ಆರಂಭವಾಗಿದೆ. ರಸ್ತೆಗಳಲ್ಲಿನ ಜಲಾವೃತಿಯಿಂದ ಸಂಚಾರ ಅಸ್ತವ್ಯಸ್ತವಾಗಿದೆ.

ಕಳೆದ ಎರಡು ದಿನಗಳಿಂದ ಮಳೆರಾಯ ಬಿಡುವು ನೀಡಿದ್ದ. ಇದೀಗ ಮತ್ತೆ ಬೆಂಗಳೂರಿನ ವರುಣ ಆರ್ಭಟಿಸಿದ್ದಾನೆ. ಬೆಂಗಳೂರು ನಗರದ ಹಲವು ಕಡೆಗಳಲ್ಲಿ ರವಿವಾರ ಸಂಜೆ ಮಳೆಯಾಗಿದೆ. ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಗಾಂಧಿನಗರ, ಶಾಂತಿನಗರ, ಜಯನಗರ ರಾಜಾಜಿನಗರ, ವಿಜಯನಗರ, ಕಾಮಾಕ್ಷಿ ಪಾಳ್ಯ, ಹೆಬ್ಬಾಳ, ಆರ್ ಟಿ ನಗರ, ಸಂಜಯ ನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಭಾನುವಾರ ಸಂಜೆ ಸುರಿದ ಮಳೆಯಿಂದ ಬೀದಿ ಬದಿ ವ್ಯಾಪಾರಿಗಳು ಮತ್ತು ಹೊರಗಡೆ ಸುತ್ತಾಡಲು ಬಂದಿದ್ದ ವಾಹನ ಸವಾರರು ಪರದಾಡಿದರು. ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದೆ.