ಹೇಗಿದೆ ನೋಡಿ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌: ಇಲ್ಲಿದೆ ಡ್ರೋನ್ ಸೆರೆಹಿಡಿದ ದೃಶ್ಯ

Edited By:

Updated on: Jan 07, 2025 | 9:40 AM

ಮಂಜುನಾಥನ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತು ಸುಸ್ತಾಗುವ ಭಕ್ತರಿಗಾಗಿ ದೇಗುಲದ ಆಡಳಿತ ಹೊಸ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಸುಸಜ್ಜಿತ, ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ವಿವಿಧ ಸೌಲಭ್ಯಗಳುಳ್ಳ ಭವ್ಯ ಕ್ಯೂ ಕಾಂಪ್ಲೆಕ್ಸ್​ನ ಡ್ರೋನ್ ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಜನವರಿ 7: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ದರ್ಮಸ್ಥಳದ ಮಂಜುನಾಥ ಸ್ವಾಮಿ ದೇಗುಲದಲ್ಲಿ ತಿರುಪತಿ ಮಾದರಿಯ ‘ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್‌’ ಆರಂಭಿಸಲಾಗುತ್ತಿದೆ. ಭಕ್ತರಿಗೆ ನೆರವಾಗುವುದಕ್ಕಾಗಿ, ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಸುಸ್ತಾಗುವುದನ್ನು ತಪ್ಪಿಸಿ ಸುಸಜ್ಜಿತ ವ್ಯವಸ್ಥೆ ಒದಗಿಸುವ ದೃಷ್ಟಿಯಿದ ನೂತನ ಸೌಲಭ್ಯ ಕಲ್ಪಿಸಲಾಗುತ್ತಿದೆ. ವಿವಿಧ ಸೌಲಭ್ಯಗಳನ್ನೊಳಗೊಂಡ ಕ್ಯೂ ಕಾಂಪ್ಲೆಕ್ಸ್‌ ಹೇಗಿದೆ ಎಂಬ ಡ್ರೋನ್ ದೃಶ್ಯ ಇಲ್ಲಿದೆ ನೋಡಿ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ವಿವರ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More