AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನ್ನ ಕೊನೆಯ ರ‍್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ

ಇದು ನನ್ನ ಕೊನೆಯ ರ‍್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ

ನಯನಾ ರಾಜೀವ್
|

Updated on:Apr 27, 2026 | 2:25 PM

Share

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು.

ಕೋಲ್ಕತ್ತಾ, ಏಪ್ರಿಲ್ 27: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು.

ಈ ಚುನಾವಣೆಯಲ್ಲಿ ಇದು ನನ್ನ ಕೊನೆಯ ರ್ಯಾಲಿ, ಮೇ 4ರ ಫಲಿತಾಂಶದ ನಂತರ ಖಂಡಿತವಾಗಿಯೂ ಬಿಜೆಪಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು ಹಿಂತಿರುಗುತ್ತಿದ್ದೇನೆ ಎಂಬ ವಿಶ್ವಾಸ ನನಗಿದೆ, ಎಂದು ಮೋದಿ ಹೇಳಿದರು. ಬೆಳಗ್ಗೆಯಿಂದಲೇ ಕಿಲೋಮೀಟರ್‌ಗಳಷ್ಟು ಉದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಜನಸ್ತೋಮವನ್ನು ಕಂಡು ಅವರು ಭಾವುಕರಾದರು ಮತ್ತು ಜನರ ಈ ಆಶೀರ್ವಾದವೇ ನನ್ನ ಉತ್ಸಾಹಕ್ಕೆ ಕಾರಣ ಎಂದರು.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಪ್ರಧಾನಿ ಕಿಡಿಕಾರಿದರು. ಬಂಗಾಳದ ಅಭಿವೃದ್ಧಿಗೆ ಟಿಎಂಸಿ ಬಳಿ ಯಾವುದೇ ಮಾರ್ಗಸೂಚಿ ಇಲ್ಲ. ರಾಜ್ಯಕ್ಕೆ ಈಗ ಡಬಲ್-ಎಂಜಿನ್ ಸರ್ಕಾರದ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Apr 27, 2026 02:24 PM
Follow Us