ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?

Edited By:

Updated on: Jun 21, 2026 | 3:50 PM

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಕಾರ್ಯವನ್ನು ಶ್ಲಾಘಿಸಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ, ನಿರುದ್ಯೋಗ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. ಮುಂಬರುವ ಸಂಸತ್ ಚುನಾವಣೆಗೆ ಸಜ್ಜಾಗಲು ಕರೆ ನೀಡಿದರು.

ಬೆಂಗಳೂರು, ಜೂನ್​​ 21: ರಾಜ್ಯ ಕಾಂಗ್ರೆಸ್​ಗೆ ಇಂದು ಮಹತ್ವದ ದಿನ. ಆರೂವರೆ ವರ್ಷ KPCC ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್​ ಚುಕ್ಕಾಣಿ ಹಿಡಿದಿದ್ದರು. ಡಿಕೆ ಶಿವಕುಮಾರ್​ ಸಿಎಂ ಆದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಬಿ.ಕೆ. ಹರಿಪ್ರಸಾದ್ ಪಕ್ಷಕ್ಕೆ ಹೊಸಬರೇನಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿ, ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಂದಿದ್ದಾರೆ. ತಳಮಟ್ಟದಿಂದ ಬಂದ ಕಾರ್ಯಕರ್ತನನ್ನು ಕೆಪಿಸಿಸಿ ಅಧ್ಯಕ್ಷ ಮಾಡಿದ್ದೇವೆ. ಪಕ್ಷ ತತ್ವಗಳನ್ನು ಮೈಗೂಡಿಸಿಕೊಂಡವರಿಗೆ ಅಧಿಕಾರ ನೀಡಿದ್ದೇವೆ ಎಂದರು. ನಮ್ಮ ಮುಂದೆ ಅನೇಕ ದೊಡ್ಡ ಸಮಸ್ಯೆಗಳಿವೆ. ಅಗತ್ಯವಸ್ತುಗಳ ದರ ಏರಿಕೆ, ಹಣದುಬ್ಬರ ಸಮಸ್ಯೆಯಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಪಠ್ಯ ಪುಸ್ತಕದ ದರ ಏರಿಕೆಯಾಗಿದೆ. ಬೆಲೆ ಏರಿಕೆ ವಿರುದ್ಧ ಹೋರಾಟದ ಹೊಣೆ ಬಿ.ಕೆ.ಹರಿಪ್ರಸಾದ್ ಮೇಲಿದೆ. ಬಿ.ಕೆ.ಹರಿಪ್ರಸಾದ್ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Jun 21, 2026 03:49 PM
Follow Us