ಬೆಂಗಳೂರು: ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ರಾಜ್ಯದ ಜನರ ಗಮನವೆಲ್ಲ ಮುಡಾ ಹಗರಣದತ್ತ ಹರಿಯುವಂತೆ ಮಾಡಿರುವ ಪ್ರಯತ್ನ ಯಶ ಕಂಡಿದೆ ಎಂದರು. ನಿನ್ನೆ ಚಾಮರಾಜನಗರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಡಾ ಸೈಟು ಹಂಚಿಕೆ ಸಂಬಂಂಧಿಸಿದಂತೆ ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿ ನನ್ನ ಹೆಸರನ್ನು ಉಲ್ಲೇಖಿಸುತ್ತಾ ಸಿಎಂ ಕುರ್ಚಿಗಾಗಿ ಟವೆಲ್ ಹಾಕಿರುವವರು ಮುಡಾ ಹಗರಣ ಬೆಳಕಿಗೆ ತಂದಿದ್ದಾರೆಅ ಂತ ಹೇಳಿರುವುದೆಲ್ಲ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ ಅಂತ ಕುಮಾರಸ್ವಾಮಿ ಹೇಳಿದರು. ಹಗರಣವೇ ನಡೆದಿಲ್ಲ ಅಂತಾದ್ರೆ ತನಿಖೆ ಯಾವ ಕಾರಣಕ್ಕಾಗಿ ನಡೆಸಲಾಗುತ್ತಿದೆ? ಧಾವಂತದಿಂದ ಹೆಲಿಕಾಪ್ಟರ್ನಲ್ಲಿ ಬಂದು ಯಾವ್ಯಾವ ದಾಖಲಾತಿಗಳನ್ನು ಅವರು ತುಂಬಿಕೊಂಡು ಹೋಗಿದ್ದಾರೆ? ಹಿಂದೆ ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕೆಂಪಣ್ಣ ಆಯೋಗದ ವರದಿಯನ್ನು ಏನು ಮಾಡಿದರು ಅಂತ ಯಾರಿಗೂ ಗೊತ್ತಾಗಲಿಲ್ಲ ಎಂದು ಹೇಳಿದ ಕುಮಾರಸ್ವಾಮಿ ಈ ಹಗರಣವನ್ನು ಎಲ್ಲಿಗೆ ಮುಟ್ಟಿಸಲಿದ್ದಾರೆ ಅನ್ನೋದು ಸಹ ಗೊತ್ತಾಗುತ್ತಿಲ್ಲ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ