ಇಂದಿರಾ ಕಿಟ್‌ನಲ್ಲಿ ಏನೇನು ಪದಾರ್ಥಗಳು ಇರುತ್ತೆ? ಇಲ್ಲಿದೆ ವಿವರ

Edited By:

Updated on: Oct 09, 2025 | 6:06 PM

ಅನ್ನಭಾಗ್ಯ ಯೋಜನೆಯಡಿ ಇಂದಿರಾ ಆಹಾರ ಕಿಟ್ ವಿತರಣೆ ಕುರಿತು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಪಡಿತರ ಚೀಟಿಯಲ್ಲಿರುವ ಸದಸ್ಯರ ಸಂಖ್ಯೆ ಆಧರಿಸಿ ಕಿಟ್ ಪ್ರಮಾಣ ನಿಗದಿಪಡಿಸಲಾಗಿದೆ. ಒಬ್ಬರು ಅಥವಾ ಇಬ್ಬರಿಗೆ 0.5 ಕೆಜಿ, ಮೂರರಿಂದ ನಾಲ್ಕು ಮಂದಿಗೆ 1 ಕೆಜಿ, ಹಾಗೂ ಐದಕ್ಕಿಂತ ಹೆಚ್ಚು ಜನರಿಗೆ 1.5 ಕೆಜಿ ಕಿಟ್ ವಿತರಿಸಲಾಗುವುದು ಎಂದಿದ್ದಾರೆ.

ಬೆಂಗಳೂರು, ಅಕ್ಟೋಬರ್​ 09: ಅನ್ನಭಾಗ್ಯ ಯೋಜನೆಯಡಿ ಇಂದಿರಾ ಆಹಾರ ಕಿಟ್ ವಿತರಣೆ ವಿಚಾರವಾಗಿ ಮಾತನಾಡಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಒಂದು ಕಾರ್ಡ್​​ನಲ್ಲಿ ಇಬ್ಬರಿದರೆ ಅರ್ಧ ಕೆಜಿ ಕಿಟ್​ ಕೊಡುತ್ತೇವೆ. 1 ಕಾರ್ಡ್​​ನಲ್ಲಿ 3-4 ಪಡಿತರದಾರರಿದ್ದರೆ ಒಂದೊಂದು ಕೆಜಿ ಕಿಟ್ ಕೊಡುವುದಾಗಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5ಕ್ಕಿಂತ ಹೆಚ್ಚು ಜನ ಇದ್ದರೆ ಒಂದೂವರೆ ಕೆಜಿವುಳ್ಳ ಕಿಟ್ ನೀಡುತ್ತೇವೆ. ರಾಜ್ಯದಲ್ಲಿ ಒಟ್ಟು 1,26,15,815 ಪಡಿತರ ಕಾರ್ಡ್‌ಗಳು ಇವೆ. ಒಟ್ಟು 4,48,62,192 ಜನರು ಅನುಕೂಲ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More