ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?

Edited By:

Updated on: Apr 16, 2026 | 10:42 PM

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಗೊಂದಲದಿಂದ ದಾವಣಗೆರೆ ಉಪಚುನಾವಣೆ ಚರ್ಚೆಯ ನಡುವೆ ಸಚಿವ ಜಮೀರ್ ಅಹ್ಮದ್ ಅವರ ಸ್ಥಾನದ ಕುರಿತು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಸಂಪುಟ ಪುನರ್‌ರಚನೆಯಾದರೆ ಜಮೀರ್ ಕೈಬಿಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್‌ಗೆ ಸಲಹೆ ನೀಡಿ, ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್ ಗೇಟ್‌ನಲ್ಲಿ ಸಚಿವ ಜಮೀರ್​​ ನಿಲ್ಲಿಸಿಕೊಂಡ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us