ನವೆಂಬರ್ ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ಚುನಾವಣೆ ಫಲಿತಾಂಶ
ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಇನ್ನು ಇತ್ತ ಕರ್ನಾಟಕದಲ್ಲಿ ಬಿಹಾರ ಚುನಾವಣೆ ಫಲಿತಾಂಶ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಚರ್ಚೆಗಳು ಶುರುವಾಗಿವೆ. ಈ ಸಂಬಂಧ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಬಿಹಾರ ಚುನಾವನೆ ಫಲಿತಾಂಶ ಸಿದ್ದರಾಮಯ್ಯನವರನ್ನು ಬಲಿಷ್ಠವನ್ನಾಗಿ ಮಾಡಿದೆ ಎಂದು ಕುಹಕವಾಡಿದ್ದಾರೆ.
ಬೆಂಗಳೂರು, (ನವೆಂಬರ್ 14): ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಇನ್ನು ಇತ್ತ ಕರ್ನಾಟಕದಲ್ಲಿ ಬಿಹಾರ ಚುನಾವಣೆ ಫಲಿತಾಂಶ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಚರ್ಚೆಗಳು ಶುರುವಾಗಿವೆ. ಈ ಸಂಬಂಧ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಬಿಹಾರ ಚುನಾವನೆ ಫಲಿತಾಂಶ ಸಿದ್ದರಾಮಯ್ಯನವರನ್ನು ಬಲಿಷ್ಠವನ್ನಾಗಿ ಮಾಡಿದೆ ಎಂದು ಕುಹಕವಾಡಿದ್ದಾರೆ.
ಇನ್ನು ಬಿಹಾರ ಚುನಾವಣೆ ಕರ್ನಾಟಕ ಬಿಜೆಪಿಗರಿಗೆ ಒಂದು ರೀತಿಯ ನಿರಾಸೆಯಾಗಿದೆ. ಯಾಕಂದ್ರೆ ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಏನಾದರೂ ಗಮನಾರ್ಹ ಸಾಧನೆ ಮಾಡಿದ್ದರೆ ಇತ್ತ ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿಯಾಗುವ ನಿರೀಕ್ಷೆಗಳು ಇದ್ದವು. ಆದ್ರೆ, ಇದೀಗ ಬಂದ ಫಲಿತಾಂಶ ಕಾಂಗ್ರೆಸ್ನ್ನು ಮಾನಸಿಕವಾಗಿ ಕುಗ್ಗಿಸುವ.ತೆ ಮಾಡಿದೆ. ಆದ್ರೆ, ಈ ರಿಸಲ್ಟ್ನಿಂದ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ತಕ್ಷಣವೇ ಯಾವುದೇ ಬದಲಾವಣೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿಲ್ಲ. ಹೀಗಾಗಿ ಸಹಜವಾಗಿಯೇ ಬಿಜೆಪಿ ಒಂದು ರೀತಿಯ ನಿರಾಸೆಯಾದಂತಾಗಿದೆ.
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

