ನವೆಂಬರ್ ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ಚುನಾವಣೆ ಫಲಿತಾಂಶ

Updated on: Nov 14, 2025 | 3:21 PM

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್​​ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್​ಜೆಡಿ ಹಾಗೂ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ. ಇನ್ನು ಇತ್ತ ಕರ್ನಾಟಕದಲ್ಲಿ ಬಿಹಾರ ಚುನಾವಣೆ ಫಲಿತಾಂಶ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಚರ್ಚೆಗಳು ಶುರುವಾಗಿವೆ. ಈ ಸಂಬಂಧ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಬಿಹಾರ ಚುನಾವನೆ ಫಲಿತಾಂಶ ಸಿದ್ದರಾಮಯ್ಯನವರನ್ನು ಬಲಿಷ್ಠವನ್ನಾಗಿ ಮಾಡಿದೆ ಎಂದು ಕುಹಕವಾಡಿದ್ದಾರೆ.

ಬೆಂಗಳೂರು, (ನವೆಂಬರ್ 14): ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್​​ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್​ಜೆಡಿ ಹಾಗೂ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ. ಇನ್ನು ಇತ್ತ ಕರ್ನಾಟಕದಲ್ಲಿ ಬಿಹಾರ ಚುನಾವಣೆ ಫಲಿತಾಂಶ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಚರ್ಚೆಗಳು ಶುರುವಾಗಿವೆ. ಈ ಸಂಬಂಧ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಬಿಹಾರ ಚುನಾವನೆ ಫಲಿತಾಂಶ ಸಿದ್ದರಾಮಯ್ಯನವರನ್ನು ಬಲಿಷ್ಠವನ್ನಾಗಿ ಮಾಡಿದೆ ಎಂದು ಕುಹಕವಾಡಿದ್ದಾರೆ.

ಇನ್ನು ಬಿಹಾರ ಚುನಾವಣೆ ಕರ್ನಾಟಕ ಬಿಜೆಪಿಗರಿಗೆ ಒಂದು ರೀತಿಯ ನಿರಾಸೆಯಾಗಿದೆ. ಯಾಕಂದ್ರೆ ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್​ ಏನಾದರೂ ಗಮನಾರ್ಹ ಸಾಧನೆ ಮಾಡಿದ್ದರೆ ಇತ್ತ ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿಯಾಗುವ  ನಿರೀಕ್ಷೆಗಳು ಇದ್ದವು. ಆದ್ರೆ, ಇದೀಗ ಬಂದ ಫಲಿತಾಂಶ ಕಾಂಗ್ರೆಸ್​​ನ್ನು ಮಾನಸಿಕವಾಗಿ ಕುಗ್ಗಿಸುವ.ತೆ ಮಾಡಿದೆ. ಆದ್ರೆ, ಈ ರಿಸಲ್ಟ್​ನಿಂದ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ತಕ್ಷಣವೇ ಯಾವುದೇ ಬದಲಾವಣೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿಲ್ಲ. ಹೀಗಾಗಿ ಸಹಜವಾಗಿಯೇ ಬಿಜೆಪಿ ಒಂದು ರೀತಿಯ ನಿರಾಸೆಯಾದಂತಾಗಿದೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More