ಸಹಸ್ರತಾಲ್ ಶಿಖರದಲ್ಲಿ 9 ಮಂದಿ ಸಾವಿಗೆ ಕಾರಣವೇನು? ಚಾರಣಿಗರ ತಂಡದ ಅಧ್ಯಕ್ಷರು ಹೇಳಿದ್ದೇನು ನೋಡಿ

Updated on: Jun 07, 2024 | 10:30 AM

ಉತ್ತರಾಖಂಡದ ಸಹಸ್ರತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ರಾಜ್ಯದ ಹಲವು ಮಂದಿ ಮೃತಪಟ್ಟಿದ್ದಾರೆ. ಬದುಕಿದವರ ರಕ್ಷಣೆ ಮಾಡಲಾಗಿದ್ದು, ಮೃತದೇಹಗಳನ್ನು ತರುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ಸಹಸ್ರತಾಲ್ ಶಿಖರಕ್ಕೆ ತೆರಳಿದ ಚಾರಣಿಗರ ತಂಡದ ಅಧ್ಯಕ್ಷ ಎಸ್​ಕೆ ಮೆಹ್ತಾ ಜೊತೆ ‘ಟಿವಿ9’ ಮಾತುಕತೆ ನಡೆಸಿ ವಿವರ ಪಡೆದಿದೆ. ಸಹಸ್ರತಾಲ್ ಶಿಖರದಲ್ಲಿ ಏನಾಗಿತ್ತು? ಪರ್ವತಾರೋಹಿಗಳ ಸಾವಿಗೆ ಕಾರಣವೇನು ಎಂಬುದನ್ನು ಅವರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ.

ಬೆಂಗಳೂರು, ಜೂನ್ 7: ಉತ್ತರಾಖಂಡದ (Uttarakhand) ಸಹಸ್ರತಾಲ್ ಶಿಖರದಲ್ಲಿ (Sahasratal peak) ಚಾರಣಕ್ಕೆ (Trkking) ತೆರಳಿದ್ದ ವೇಳೆ ಮೃತಪಟ್ಟವರ ಪಾರ್ಥಿವ ಶರೀರಗಳನ್ನು ಬೆಂಗಳೂರಿಗೆ ತರುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಮಧ್ಯೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿರುವ ಸಚಿವ ಕೃಷ್ಣಬೈರೇಗೌಡ, 9.45 ಕ್ಕೆ ಇನ್ನೂ ನಾಲ್ಕು ಶವಗಳನ್ನು ತರಲಾಗ್ತಿದೆ. ಉಳಿದ ಎರಡು ಶವಗಳನ್ನು 1 ಗಂಟೆಗೆ ತರಲಾಗುತ್ತದೆ. 9 ಗಂಟೆಯಿಂದ 1 ಗಂಟೆಯೊಳಗೆ ಎಲ್ಲಾ ಶವಗಳನ್ನು ತರುತ್ತೇವೆ. ಮೃತರ ಸಂಬಂಧಿಕರಿಗೆ ಅಗತ್ಯ ಸಹಕಾರ ನೀಡಲಾಗ್ತಿದೆ ಎಂದರು.

ಈಗಾಗಲೇ ಮೂರು ಶವಗಳನ್ನು ಕರೆ ತರಲಾಗಿದೆ. ಶವಗಳಿಗೆ ಗೌರವ ನೀಡಿ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಶವಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರ ಮಾಡಲಾಗಿದೆ. ಬೆಳಗ್ಗೆ 5.45 ಕ್ಕೆ ಮೂರು ಶವಗಳು ಬಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ್​ ಚಾರಣ: ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಿಷ್ಟು

ಈ ಮಧ್ಯೆ, ಸಹಸ್ರತಾಲ್ ಶಿಖರಕ್ಕೆ ತೆರಳಿದ ಚಾರಣಿಗರ ತಂಡದ ಅಧ್ಯಕ್ಷ ಎಸ್​ಕೆ ಮೆಹ್ತಾ ಜೊತೆ ‘ಟಿವಿ9’ ಮಾತುಕತೆ ನಡೆಸಿದ್ದು, ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದೆ. ಸಹಸ್ರತಾಲ್ ಶಿಖರದಲ್ಲಿ ಏನಾಗಿತ್ತು? ಪರ್ವತಾರೋಹಿಗಳ ಸಾವಿಗೆ ಕಾರಣವೇನು ಎಂಬುದನ್ನು ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More