ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಸಚಿವ ಶಿವರಾಜ್ ತಂಗಡಗಿ
ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಇಪಿ-ಟಿಎಸ್ಪಿ ಅನುದಾನ ಬಳಕೆಯ ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿ, ಅವರು ಬಡವರ ಕಾಳಜಿ ತೋರಿಲ್ಲ ಎಂದು ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದು, ಈ ವಿಷಯವನ್ನು ಸದನದಲ್ಲಿ ಚರ್ಚಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಕೊಪ್ಪಳ, ಮಾರ್ಚ್ 01: ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಈ ಕುರಿತು ಸದನದಲ್ಲಿ ಕೇಳಲಿ ಉತ್ತರಿಸುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದ್ದಾರೆ. ಗ್ಯಾರಂಟಿಗಳಿಗೆ ಎಸ್ಸಿಇಪಿ-ಟಿಎಸ್ಪಿ ಅನುದಾನ ವರ್ಗಾವಣೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಎಂದು ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.