AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪಸಿಂಹನ ಆಕ್ಷೇಪಣೆ ಮುಖ್ಯವಲ್ಲ, ಸಂವಿಧಾನವೇ ನಮಗೆ ಪರಮೋಚ್ಚ: ಡಾ ಹೆಚ್ ಸಿ ಮಹದೇವಪ್ಪ

ಪ್ರತಾಪಸಿಂಹನ ಆಕ್ಷೇಪಣೆ ಮುಖ್ಯವಲ್ಲ, ಸಂವಿಧಾನವೇ ನಮಗೆ ಪರಮೋಚ್ಚ: ಡಾ ಹೆಚ್ ಸಿ ಮಹದೇವಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on:Aug 25, 2025 | 1:06 PM

Share

ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಇಡೀ ದೇಶಕ್ಕೆ ಗೌರವ ಘನತೆ ತಂದಿದ್ದಾರೆ, ಅವರನ್ನು ಬಿಜೆಪಿ ನಾಯಕರು ಭಾರತೀಯ ನಾಗರಿಕಳನ್ನಾಗಿ ನೋಡುತ್ತಾರೆಯೇ ಅಥವಾ ಭಾರತೀಯರಿಂದ ಪ್ರತ್ಯೇಕಿಸುತ್ತಾರೆಯೇ? ಬಾನು ಅವರು ಕನ್ನಡ ಸಾಹಿತ್ಯ ಲೋಕ ಮತ್ತು ಕನ್ನಡ ಭಾಷೆಗೆ ಒಂದು ಪ್ರತಿಷ್ಠಿತ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಂದು ಕೊಟ್ಟಿದ್ದಾರೆ ಎಂದು ಮಹದೇವಪ್ಪ ಹೇಳಿದರು.

ಬೆಂಗಳೂರು, ಆಗಸ್ಟ್ 25: ಈ ಬಾರಿಯ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ (Banu Mushtaq) ಅವರಿಂದ ಉದ್ಘಾಟಿಸುತ್ತಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಣೆ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಮಾಜ ಕಲ್ಯಾಣ ಖಾತೆ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಅವರು ಆಕ್ಷೇಪಣೆ ಎತ್ತಿದರೆ ಏನಂತೆ, ನಮಗೆ ಅವರಿವರು ಹೇಳಿದ್ದು ಮುಖ್ಯವಲ್ಲ, ಸಂವಿಧಾನ ಹೇಳೋದು ಮಾತ್ರ ಪರಮೋಚ್ಛ, ದಸರಾ ನಾಡಿನ ಸಾಂಸ್ಕೃತಿಕ ಜೀವನವನ್ನು ಅಭಿವ್ಯಕ್ತಿಗೊಳಿಸುವ ನಾಡಹಬ್ಬ, ದಸರೆಯನ್ನು ಎಲ್ಲ 140 ಕೋಟಿ ಭಾರತೀಯರು ಅಚರಿಸುತ್ತಾರೆ ಎಂದು ಹೇಳಿದರು. ರಾಜಕೀಯ ಪಕ್ಷಗಳು ಧರ್ಮದ ವಿಚಾರವನ್ನು ಚರ್ಚಿಸಲೇಬಾರದು, ಧರ್ಮದ ಆಚರಣೆಯು ಜನರ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟ ವಿಷಯವಾಗಿದೆ, ಸರ್ವರಿಗೂ ಸಮಬಾಳು ಸಮಪಾಲು ಎಂದು ಸಂವಿಧಾನ ಹೇಳುತ್ತದೆ ಎಂದು ಮಹದೇವಪ್ಪ ಹೇಳಿದರು.

ಇದನ್ನು ಓದಿ:   ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Aug 25, 2025 01:04 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More