‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ಪುನೀತ್​ ರಾಜ್​ಕುಮಾರ್​​ ನಿಧನದಿಂದ ಅವರ ಕುಟುಂಬಕ್ಕೆ ತೀವ್ರ ನೋವಾಗಿದೆ. ಅ.29 ಎಂಬುದು ಇಡೀ ಕರುನಾಡಿನ ಪಾಲಿಗೆ ಕರಾಳ ದಿನ. ಅಂದು ಆದ ಸಂಕಟವನ್ನು ಶಿವರಾಜ್​ಕುಮಾರ್​ ಅವರು ವಿವರಿಸಿದ್ದಾರೆ.

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು
| Updated By: ಮದನ್​ ಕುಮಾರ್​

Updated on: Nov 11, 2021 | 1:31 PM

ಪುನೀತ್​ ರಾಜ್​ಕುಮಾರ್​ ಇನ್ನಿಲ್ಲ ಎಂಬ ಸುದ್ದಿಯನ್ನು ಮೊದಲ ಬಾರಿಗೆ ಕೇಳಿದಾಗ ಇಡೀ ಕರುನಾಡಿಗೆ ಆಘಾತ ಆಗಿತ್ತು. ಅವರ ಕುಟುಂಬಕ್ಕೆ ಆದ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಅಂದು (ಅ.29) ಬೆಳಗ್ಗೆ ಶಿವಣ್ಣ ನಟಿಸಿದ್ದ ‘ಭಜರಂಗಿ 2’ ಚಿತ್ರ ರಿಲೀಸ್​ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿತ್ತು. ಆ ಖುಷಿಯ ಮಧ್ಯೆಯೇ ಅಪ್ಪು ನಿಧನದ ಸುದ್ದಿ ಸಿಡಿಲಿನಂತೆ ಬಂದೆರಗಿತ್ತು. ಆದ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಶಿವರಾಜ್​ಕುಮಾರ್​ ವಿವರಿಸಿದ್ದಾರೆ. ಟಿವಿ9 ನಡೆಸಿದ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಶಿವಣ್ಣ ಹಂಚಿಕೊಂಡಿದ್ದಾರೆ. ಸಹೋದರನ ಅಗಲಿಕೆಯ ನೋವನ್ನು ಅವರು ತೋಡಿಕೊಂಡಿದ್ದಾರೆ.

‘ಮೊದಲ ಬಾರಿಗೆ ಆ ಸುದ್ದಿ ಕೇಳಿದಾಗ ನನಗೆ ಮೈಯಲ್ಲಿ ನಡುಕು ಬಂತು. ಫೋನ್​ ತೆಗೆದು ಎಸೆದು, ಕೆಳಗೆ ಕುಳಿತುಕೊಂಡುಬಿಟ್ಟೆ. ನನ್ನ ತಮ್ಮನಿಗೆ ಯಾಕೆ ಹೀಗೆ ಆಯ್ತು? ಸಂಪೂರ್ಣ ಬ್ಲಾಂಕ್​ ಆದೆ. ತೀವ್ರವಾಗಿ ಕೋಪ ಬರುತ್ತಿತ್ತು. ಎಲ್ಲರಿಗೂ ಬಯ್ಯುತ್ತಿದ್ದೆ. ದೊಡ್ಡ ಒಂದು ರಾಡ್​ ತೆಗೆದುಕೊಂಡು ತಲೆಗೆ ಹೊಡೆದರೆ ಹೇಗೆ ಆಗುತ್ತೋ ಆ ರೀತಿ ನೋವು ಆಯಿತು. ಸಾಮಾನ್ಯವಾಗಿ ನಾನೇ ಗಾಡಿ ಓಡಿಸುತ್ತೇನೆ. ಅಂದು ನಾನು ಗಾಡಿ ಓಡಿಸುವುದಿಲ್ಲ ಅಂತ ಹೇಳಿ ಹಿಂದಿನ ಸೀಟ್​ನಲ್ಲಿ ಕುಳಿತೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ

Follow us
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ