ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?

| Updated By: ಗಣಪತಿ ಶರ್ಮ

Updated on: Oct 01, 2024 | 3:00 PM

ಸೋಮವಾರವಷ್ಟೇ ಮಂಡ್ಯದಲ್ಲಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಇಂದು ಧಾರವಾಡದಲ್ಲಿ ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮುಂದಿನ ಟೈರ್ ಕಿತ್ತುಹೋಗಿದೆ. ಅದೃಷ್ಟವಶಾತ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿಹೋಗಿದೆ. ವಿಡಿಯೋ ಇಲ್ಲಿದೆ ನೋಡಿ.

ಧಾರವಾಡ, ಅಕ್ಟೋಬರ್ 1: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಾಲವಾಡ ಕ್ರಾಸ್​ ಬಳಿ ಸಾರಿಗೆ ಬಸ್​ ಚಕ್ರ ದಿಢೀರ್​ ಕಳಚಿದೆ. ಬಸ್​ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ನವಲಗುಂದ ಘಟಕಕ್ಕೆ ಸೇರಿದ ಸಾರಿಗೆ ಬಸ್ ​ಧಾರವಾಡದಿಂದ ನವಲಗುಂದ ಕಡೆಗೆ ತೆರಳುತ್ತಿತ್ತು. ಬಸ್​​ನ​ ಮುಂದಿನ ಚಕ್ರ ಕಳಚುತ್ತಿದ್ದಂತೆಯೇ ಚಾಲಕ ಬಸ್ಸನ್ನು ರಸ್ತೆ ಪಕ್ಕ ನಿಲ್ಲಿಸಿ​ ಸಂಭಾವ್ಯ ದುರಂತ ತಪ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on