Video: ರೇಬಿಸ್ ಕುರಿತ ಜಾಗೃತಿ ನಾಟಕದ ವೇಳೆ ಕಲಾವಿದನನ್ನು ಕಚ್ಚಿದ ಬೀದಿ ನಾಯಿ

Updated on: Oct 07, 2025 | 1:03 PM

ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೇಬಿಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ರೇಬಿಸ್ ಕುರಿತು ಜಾಗೃತಿ ನಾಟಕವನ್ನು ಆಯೋಜಿಸಲಾಗಿತ್ತು. ಆದರೆ ಆ ಬೀದಿ ನಾಟಕ ಅನಿರೀಕ್ಷಿತ ತಿರುವು ಪಡೆದುಕೊಂಡಿತ್ತು. ಬೀದಿ ನಾಯಿಯೊಂದು ವೇದಿಕೆಯ ಮೇಲೆ ಓಡಿ ಬಂದು ಕಲಾವಿದರೊಬ್ಬರನ್ನು ಕಚ್ಚಿತ್ತು.

ಕಣ್ಣೂರು, ಅಕ್ಟೋಬರ್ 07: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ರೇಬಿಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ರೇಬಿಸ್ ಕುರಿತು ಜಾಗೃತಿ ನಾಟಕವನ್ನು ಆಯೋಜಿಸಲಾಗಿತ್ತು. ಆದರೆ ಆ ಬೀದಿ ನಾಟಕ ಅನಿರೀಕ್ಷಿತ ತಿರುವು ಪಡೆದುಕೊಂಡಿತ್ತು. ಬೀದಿ ನಾಯಿಯೊಂದು ವೇದಿಕೆಯ ಮೇಲೆ ಓಡಿ ಬಂದು ಕಲಾವಿದರೊಬ್ಬರನ್ನು ಕಚ್ಚಿತ್ತು.

ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಂದಕ್ಕೈ ಕೃಷ್ಣ ಪಿಳ್ಳೈ ಗ್ರಂಥಾಲಯದಲ್ಲಿ ಬೀದಿ ನಾಯಿಗಳ ದಾಳಿಯ ಬಗ್ಗೆ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಪೆಕ್ಕಲಂ (ರೇಬಿಸ್ ಸೀಸನ್) ಎಂಬ ಏಕಾಂಕ ನಾಟಕವನ್ನು ಪ್ರದರ್ಶಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ನಾಟಕದಲ್ಲಿ ನಾಯಿಗಳು ಬೊಗಳುತ್ತಾ ಮಗುವಿನ ಮೇಲೆ ದಾಳಿ ಮಾಡುತ್ತಿರುವುದು ಹಾಗೂ ಮಗುವನ್ನು ಆ ನಾಯಿಯಿಂದ ರಕ್ಷಿಸುವ ದೃಶ್ಯವಿತ್ತು. ಈ ವೇಳೆ ಸ್ಪೀಕರ್​ನಲ್ಲಿ ನಾಯಿ ಬೊಗಳುವ ಶಬ್ದ ಕೇಳಿ ಓಡಿ ಬಂದ ಬೀದಿ ನಾಯಿ ಕಲಾವಿದನನ್ನು ಕಚ್ಚಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More