ಸುಜಾತ ಭಟ್ ಹೇಳಿದ್ದೆಲ್ಲ ಸತ್ಯವೆಂದು ನಾವು ಕೂಡ ನಂಬಿ ಮೋಸಹೋದೆವು: ಜಯಂತ್, ಹೋರಾಟಗಾರ

ಅರುಣ್​ ಕುಮಾರ್​ ಬೆಳ್ಳಿ

Updated on: Aug 22, 2025 | 5:09 PM

ಶವ ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್​ಐಟಿ ರಚನೆ ಮಾಡಿದಾಗ ಸುಜಾತ ಭಟ್ ಅಧಿಕಾರಿಗಳನ್ನು ಭೇಟಿ ಮಾಡಿ ಅವರಿಗೂ ದೂರು ನೀಡಿದರು ಎಂದು ಹೇಳಿದ ಜಯಂತ್, ಮಹೇಶ್ ಶೆಟ್ಟಿ ತಿಮರೋಡಿಯವರು ಸುಜಾತ ಅವರಿಗೆ ವಾಸಮಾಡಲು ಸ್ಥಳ ಒದಗಿಸಿದರು. ಮಹೇಶ್ ಅವರಿಗೂ ಸುಜಾತ ಅದೇ ಕತೆಯನ್ನು ಹೇಳಿದ್ದರು, ಆದರೆ ಮಹೇಶಣ್ಣಗೆ ವಾಸ್ತವ ಗೊತ್ತಿಲ್ಲ, ಅದು ತನಗೆ ಮಾತ್ರ ಗೊತ್ತು ಎಂದು ಜಯಂತ್ ಹೇಳಿದರು.

ದಕ್ಷಿಣ ಕನ್ನಡ, ಆಗಸ್ಟ್ 22: ಅನನ್ಯ ಭಟ್ ತಮ್ಮ ಮಗಳು ಎಂದು ಹೇಳಿಕೊಂಡು ಸುತ್ತುತ್ತಿರುವ ಸುಜಾತ ಭಟ್ (Sujata Bhat) ಹೆಸರಿನ ಮಹಿಳೆ ಹೇಳಿದ ಸುಳ್ಳುಗಳನ್ನು ತಾವು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸತ್ಯವೆಂದು ನಂಬಿದ್ದೆವು ಎಂದು ಹೋರಾಟಗಾರ ಜಯಂತ್ (Jayant, activist) ಹೇಳುತ್ತಾರೆ. ನಮ್ಮ ವರದಿಗಾರನೊಂದಿಗೆ ಮಾತಾಡಿರುವ ಅವರು, ತಾನು ಪ್ರಭಾವಿ ವ್ಯಕ್ತಿಗಳು ಜಮೀನುಗಳನ್ನು ವಶಪಡಿಸಿಕೊಳ್ಳುತ್ತಿರುವುದರ ವಿರುದ್ಧ ಹೋರಾಟ ಮಾಡುತ್ತಿದ್ದಾಗ ಸುಮಾರು ಎರಡು ವರ್ಷಗಳ ಹಿಂದೆ ಸುಜಾತಾ ಭಟ್ ಈಗ ಮಾಧ್ಯಮಗಳ ಮುಂದೆ ಹೇಳಿಕೊಂಡು ತಿರುಗುತ್ತಿರುವ ವಿಷಯವನ್ನೇ ತಮ್ಮ ಮುಂದೆ ಹೇಳಿಕೊಂಡರು. ಪಾಪ ವಯಸ್ಸಾದ ಮಹಿಳೆ ಅಂತ ನಾವು ಸಹಾಯಕ್ಕೆ ಹೋದೆವು, ಹಾಯ್ ಕರ್ನಾಟಕದ ವಿಜಯ್ ಎನ್ನುವವರು ಎರಡು ಎಪಿಸೋಡ್​ಗಳನ್ನು ಮಾಡಿದರು. ಮಗಳ ವಿಷಯದಲ್ಲಿ ದಾಖಲೆಗಳನ್ನು ತಂದುಕೊಡಿ ಅಂದಾಗ ಅವರು ಉಡುಪಿ ಮತ್ತು ಎಲ್ಲೆಲ್ಲೋ ಸುತ್ತಿದರೇ ಹೊರತು ದಾಖಲೆ ಕೊಡಲಿಲ್ಲ ಎಂದು ಜಯಂತ್ ಹೇಳಿದರು.

ಇದನ್ನೂ ಓದಿ:  ಅನನ್ಯ ಭಟ್​ ಪ್ರಕರಣ ಎಸ್​ಐಟಿಗೆ ಹಸ್ತಾಂತರ: ಸುಜಾತ ಬಗ್ಗೆ ಅಚ್ಚರಿ ಸಂಗತಿ ರಿವಿಲ್​ ಮಾಡಿದ ಸಹೋದರ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.