ಪ್ರಜ್ವಲ್ ತಪ್ಪಿತಸ್ಥ ಅಂತ ಕೋರ್ಟ್ ತೀರ್ಪು ನೀಡಿದ ಬಳಿಕ ತಾನು ಹೇಳೋದೇನಿರುತ್ತದೆ? ಸುಮಲತಾ ಅಂಬರೀಶ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 01, 2025 | 5:40 PM

ಪ್ರಕರಣದ ಎಲ್ಲ ಅಂಶಗಳನ್ನು ಗಮನಿಸಿಯೇ ಜನಪ್ರತಿನಿಧಿಗಳ ಕೋರ್ಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿರುತ್ತದೆ, ಕೋರ್ಟ್ ಮಾತಾಡಿರುವುದರಿಂದ ತಾನು ಮಾತಾಡುವುದರಲ್ಲಿ ಅರ್ಥವಿರುವುದಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದರು. ಕಾಂಗ್ರೆಸ್ ನಾಯಕರನ್ನು ಹೊರತುಪಡಿಸಿ, ಬಿಜೆಪಿ ನಾಯಕರಾಗಲೀ, ಜೆಡಿಎಸ್ ಮುಖಂಡರಾಗಲೀ ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ.

ಮಂಡ್ಯ, ಆಗಸ್ಟ್ 1: ಕೆಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಎಂದು ತೀರ್ಪು ಪ್ರಕಟಿಸಿ ಸುಮಾರು ಹೊತ್ತಾಗಿದ್ದರೂ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ವಿಷಯ ಗೊತ್ತಾಗಿಲ್ಲ. ಈಗ ಮಾಧ್ಯಮದವರು ಹೇಳಿದ ನಂತರವೇ ಅದು ಗೊತ್ತಾಗಿದ್ದು ಎಂದು ಸುಮಲತಾ ಹೇಳಿದರು. ಕೋರ್ಟೇ ತೀರ್ಪು ನೀಡಿದ ಬಳಿಕ ನಾನು ಹೇಳೋದೇನಿರುತ್ತೆ? ಕೋರ್ಟ್ ತೀರ್ಪು ಎಂದರೆ ಮುಗೀತು, ಎಲ್ಲರೂ ಅದರ ಆದೇಶವನ್ನು ಪಾಲಿಸಬೇಕು, ಇದು ಕೋರ್ಟ್ ನೀಡಿರುವ ಆದೇಶ ಮತ್ತು ಅದರ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲದೆ ಕಾರಣ ಕಾಮೆಂಟ್ ಮಾಡಲಾರೆ ಎಂದು ಸುಮಲತಾ ಅಂಬರೀಷ್ ಹೇಳಿದರು.

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ದೋಷಿ: ಈ ಪ್ರಕರಣದಲ್ಲಿ ಹೊಸ ದಾಖಲೆ ಬರೆದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 01, 2025 04:59 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.